ಯಡಿಯೂರಪ್ಪ 
ರಾಜಕೀಯ

'ಯಡಿಯೂರಪ್ಪ ಅವರೇ, ಸೋಂಕನ್ನು ರಾಜ್ಯದಾದ್ಯಂತ ಹಬ್ಬಿಸುವ ಹರಕೆಯನ್ನು ಯಾವ ದೇವರಿಗೆ ಹೊತ್ತಿದ್ದೀರಿ?’

ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕೊರೋನಾ ಸೋಂಕನ್ನು ರಾಜ್ಯದಾದ್ಯಂತ ಹಬ್ಬಿಸುವ ಹರಕೆಯನ್ನು ಯಾವ ದೇವರಿಗೆ ಹೊತ್ತಿದ್ದೀರಿ?’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕೊರೋನಾ ಸೋಂಕನ್ನು ರಾಜ್ಯದಾದ್ಯಂತ ಹಬ್ಬಿಸುವ ಹರಕೆಯನ್ನು ಯಾವ ದೇವರಿಗೆ ಹೊತ್ತಿದ್ದೀರಿ?’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಹಳ್ಳಿಗಳಿಗೆ ತೆರಳಿದವರಿಗೆ ಕಡ್ಡಾಯ ಕ್ವಾರಂಟೈನ್ ಹಾಗೂ ಸೋಂಕು ಪರೀಕ್ಷೆ ನಿಯಮ ರೂಪಿಸಿಲ್ಲ. ನಗರಗಳಲ್ಲಿ, ಕಿಕ್ಕಿರಿದು ತುಂಬಿದ ಬಸ್ಸುಗಳಲ್ಲಿ ಅಂಟಿದ ಸೋಂಕು ಹಳ್ಳಿ ಹಳ್ಳಿಗಳಿಗೆ ತಲುಪಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಬಿಜೆಪಿ ಸರ್ಕಾರದ ಬೌದ್ಧಿಕ ದಿವಾಳಿತನ ಹಾಗೂ ಪೂರ್ವ ತಯಾರಿ ಇಲ್ಲದ ಏಕಾಏಕಿಯ ಲಾಕ್‌ಡೌನ್‌ನಿಂದಾಗಿ ಸೋಂಕು ನಿಯಂತ್ರಿಸುವ ಬದಲಿಗೆ ಇನ್ನಷ್ಟು ಹಬ್ಬಿಸಲು ಕಾರಣವಾಗಲಿದೆ. ಹೆಚ್ಚುವರಿಯಾಗಿ ಬಿಎಂಟಿಸಿ ಬಸ್‌ಗಳನ್ನು ಉಪಯೋಗಿಸಿಕೊಂಡು ಶೇ 50ರಷ್ಟು ನಿಯಮ ಪಾಲನೆಯಲ್ಲಿ ಸಾರಿಗೆ ವ್ಯವಸ್ಥೆ ನಿರ್ಮಿಸಬಹುದಿತ್ತು. ಆದರೆ, ಸರ್ಕಾರ ಕಂಬಳಿ ಹೊದ್ದು ಮಲಗಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.

‘ರಾಜ್ಯದಲ್ಲಿ ಮಂತ್ರಿಗಳಿಗೆ ಬೆಡ್‌ ಸಿಗುತ್ತಿಲ್ಲ. ಸಾಮಾನ್ಯರ ಸ್ಥಿತಿ ಇನ್ನೂ ಭೀಕರ’ ಎಂದು ರಾಜ್ಯ ಸರ್ಕಾರವನ್ನು ಕಾಂಗ್ರೆಸ್‌ ಟೀಕಿಸಿದೆ. ಸಚಿವರಾದ ಎಂಟಿಬಿ ನಾಗರಾಜ್‌ ಅವರು ತಮಗೇ ಬೆಡ್ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇತ್ತ ಮಾಧುಸ್ವಾಮಿ ಪ್ರಭಾವಕ್ಕೂ ಬೆಡ್ ಸಿಗಲಿಲ್ಲ. ಮಂತ್ರಿಗಳಿಗೆ ಹೀಗಾದರೆ ಜನ ಸಾಮಾನ್ಯರ ಸ್ಥಿತಿ ಇನ್ನೂ ಭೀಕರ’ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT