ಹೆಚ್ ಡಿ ದೇವೇಗೌಡ- ಸಿಎಂ ಬೊಮ್ಮಾಯಿ ಭೇಟಿ 
ರಾಜಕೀಯ

ಬೊಮ್ಮಾಯಿ ಭೇಟಿ ಬಳಿಕ ಹೆಚ್ ಡಿ ದೇವೇಗೌಡ ಹೇಳಿದ್ದಿಷ್ಟು...

ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ. 

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ. 

ಬೊಮ್ಮಾಯಿ ಭೇಟಿ ಬಳಿಕ ಪ್ರತಿಕ್ರಿಯೆ ನೀಡಿರುವ ಹೆಚ್ ಡಿ ದೇವೇಗೌಡ, ಸಿಎಂ ಬೊಮ್ಮಾಯಿ ಅವರಿಗೆ ನಮ್ಮ ಸಹಕಾರ ಇರುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ ಬಗ್ಗೆಯೂ ಮಾತನಾಡಿರುವ ಅವರು, ನಾವು ರಾಜ್ಯಸಭೆಯಲ್ಲೂ ಸರ್ಕಾರಕ್ಕೆ ಸಹಕಾರ ಕೊಡುತ್ತೇವೆ ಆದರೆ ಕೇಂದ್ರ ಸರ್ಕಾರದಿಂದ ಸಮಸ್ಯೆ ಇರಬಾರದು ಎಂದು  ದೇವೇಗೌಡ ತಿಳಿಸಿದ್ದಾರೆ.

75 ವರ್ಷಗಳಾದವರಿಗೆ ಪ್ರಮುಖ ಹುದ್ದೆಗಳನ್ನು ನೀಡುವಂತಿಲ್ಲ ಎಂಬ ನಿಬಂಧನೆಯ ಆಧಾರದಲ್ಲಿ ಯಡಿಯೂರಪ್ಪ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಈಗ ಬೊಮ್ಮಾಯಿ ಸಿಎಂ ಆಗಿದ್ದಾರೆ. ಯಡಿಯೂರಪ್ಪ ಅವರ ಆಶೀರ್ವಾದ ಇಲ್ಲದೇ ಸರ್ಕಾರ ನಡೆಯುವುದಿಲ್ಲ. ಅವರ ಆಶೀರ್ವಾದ ಅಗತ್ಯ, ಯಡಿಯೂರಪ್ಪ ಅವರಿಂದಲೇ ಬೊಮ್ಮಾಯಿ ಸಿಎಂ ಆಗಿದ್ದಾರೆ ಬೊಮ್ಮಾಯಿಗೆ ನಮ್ಮ ಸಹಕಾರ ಇರುತ್ತೆ ಎಂದು ತಿಳಿಸಿದರು.

ಇನ್ನು ಜನತಾದಳದಿಂದ ಹೋದವರು ಸಿಎಂ ಆಗುತ್ತಿದ್ದಾರೆ ಎಂಬ ಹೇಳಿಕೆಗಳ ಬಗ್ಗೆಯೂ ದೇವೇಗೌಡ ಪ್ರತಿಕ್ರಿಯಿಸಿದ್ದು, ಎಲ್ಲರೂ ಸಿಎಂ ಆಗಲು ಆಗಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ಜನತಾದಳದಿಂದ ಬಹಳಷ್ಟು ಮಂದಿ ಹೋದರು ಅವರೆಲ್ಲರೂ ಸಿಎಂ ಆಗಿದ್ದಾರಾ? ಎಲ್ಲರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಬೊಮ್ಮಾಯಿ ಬಿಜೆಪಿಯಲ್ಲಿ ನಡೆದುಕೊಂಡ ರೀತಿಯನ್ನು ನೋಡಿ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಾರೆ ಎಂದು ದೇವೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT