ಹೆಚ್ ಡಿ ದೇವೇಗೌಡ- ಸಿಎಂ ಬೊಮ್ಮಾಯಿ ಭೇಟಿ 
ರಾಜಕೀಯ

ಬೊಮ್ಮಾಯಿ ಭೇಟಿ ಬಳಿಕ ಹೆಚ್ ಡಿ ದೇವೇಗೌಡ ಹೇಳಿದ್ದಿಷ್ಟು...

ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ. 

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ. 

ಬೊಮ್ಮಾಯಿ ಭೇಟಿ ಬಳಿಕ ಪ್ರತಿಕ್ರಿಯೆ ನೀಡಿರುವ ಹೆಚ್ ಡಿ ದೇವೇಗೌಡ, ಸಿಎಂ ಬೊಮ್ಮಾಯಿ ಅವರಿಗೆ ನಮ್ಮ ಸಹಕಾರ ಇರುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ ಬಗ್ಗೆಯೂ ಮಾತನಾಡಿರುವ ಅವರು, ನಾವು ರಾಜ್ಯಸಭೆಯಲ್ಲೂ ಸರ್ಕಾರಕ್ಕೆ ಸಹಕಾರ ಕೊಡುತ್ತೇವೆ ಆದರೆ ಕೇಂದ್ರ ಸರ್ಕಾರದಿಂದ ಸಮಸ್ಯೆ ಇರಬಾರದು ಎಂದು  ದೇವೇಗೌಡ ತಿಳಿಸಿದ್ದಾರೆ.

75 ವರ್ಷಗಳಾದವರಿಗೆ ಪ್ರಮುಖ ಹುದ್ದೆಗಳನ್ನು ನೀಡುವಂತಿಲ್ಲ ಎಂಬ ನಿಬಂಧನೆಯ ಆಧಾರದಲ್ಲಿ ಯಡಿಯೂರಪ್ಪ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಈಗ ಬೊಮ್ಮಾಯಿ ಸಿಎಂ ಆಗಿದ್ದಾರೆ. ಯಡಿಯೂರಪ್ಪ ಅವರ ಆಶೀರ್ವಾದ ಇಲ್ಲದೇ ಸರ್ಕಾರ ನಡೆಯುವುದಿಲ್ಲ. ಅವರ ಆಶೀರ್ವಾದ ಅಗತ್ಯ, ಯಡಿಯೂರಪ್ಪ ಅವರಿಂದಲೇ ಬೊಮ್ಮಾಯಿ ಸಿಎಂ ಆಗಿದ್ದಾರೆ ಬೊಮ್ಮಾಯಿಗೆ ನಮ್ಮ ಸಹಕಾರ ಇರುತ್ತೆ ಎಂದು ತಿಳಿಸಿದರು.

ಇನ್ನು ಜನತಾದಳದಿಂದ ಹೋದವರು ಸಿಎಂ ಆಗುತ್ತಿದ್ದಾರೆ ಎಂಬ ಹೇಳಿಕೆಗಳ ಬಗ್ಗೆಯೂ ದೇವೇಗೌಡ ಪ್ರತಿಕ್ರಿಯಿಸಿದ್ದು, ಎಲ್ಲರೂ ಸಿಎಂ ಆಗಲು ಆಗಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ಜನತಾದಳದಿಂದ ಬಹಳಷ್ಟು ಮಂದಿ ಹೋದರು ಅವರೆಲ್ಲರೂ ಸಿಎಂ ಆಗಿದ್ದಾರಾ? ಎಲ್ಲರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಬೊಮ್ಮಾಯಿ ಬಿಜೆಪಿಯಲ್ಲಿ ನಡೆದುಕೊಂಡ ರೀತಿಯನ್ನು ನೋಡಿ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಾರೆ ಎಂದು ದೇವೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT