ಬಸವರಾಜ ಬೊಮ್ಮಾಯಿ 
ರಾಜಕೀಯ

ಸಚಿವ ಸಂಪುಟ ರಚನೆಗೆ ಇಂದು ಅಥವಾ ನಾಳೆ ಸೂಚನೆ ಬರುವ ಸಾಧ್ಯತೆ: ಸಿಎಂ ಬಸವರಾಜ ಬೊಮ್ಮಾಯಿ 

ಬಹು ನಿರೀಕ್ಷಿತ ಸಚಿವ ಸಂಪುಟ ರಚನೆಗೆ ಇಂದು ಅಥವಾ ನಾಳೆ ಹೈಕಮಾಂಡ್ ನಿಂದ ಸೂಚನೆ ಬರುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಬಹು ನಿರೀಕ್ಷಿತ ಸಚಿವ ಸಂಪುಟ ರಚನೆಗೆ ಇಂದು ಅಥವಾ ನಾಳೆ ಹೈಕಮಾಂಡ್ ನಿಂದ ಸೂಚನೆ ಬರುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ಸಚಿವ ಸಂಪುಟ ರಚನೆ ಬಗ್ಗೆ ಚರ್ಚಿಸಲು ಬಂದಿದ್ದರೇ, ಯಡಿಯೂರಪ್ಪವರ ಕಾವೇರಿ ನಿವಾಸ ಒಂದರ್ಥದಲ್ಲಿ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಹೇಳಲಾಗುತ್ತಿದೆ. ಅದರ ಜೊತೆಗೆ ಸಚಿವಾಕಾಂಕ್ಷಿ ಶಾಸಕರು ಸಿಎಂ ಬೊಮ್ಮಾಯಿಯವರ ಆರ್ ಟಿ ನಗರ ನಿವಾಸಕ್ಕೆ ಒಬ್ಬರ ಮೇಲೊಬ್ಬರಂತೆ ಬಂದು ಭೇಟಿಯಾಗುತ್ತಿದ್ದುದು ಕಂಡುಬಂತು.

ಇಂದು ಬೆಳಗ್ಗೆ ತಮ್ಮ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹದಿಂದ ಆಗಿರುವ ಹಾನಿ, ನಷ್ಟದ ಬಗ್ಗೆ ಹಣಕಾಸಿನ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲು ಅಂದಾಜಿಸಲಾಗುತ್ತಿದೆ. ಇಂದು ಅಧಿಕಾರಿಗಳ ಸಭೆ ನಡೆಸಿ ನಂತರ ಮಾಹಿತಿ ನೀಡುತ್ತೇನೆ ಎಂದರು.

ಸಿಎಂ ಬೊಮ್ಮಾಯಿಯವರ ಆರ್ ಟಿ ನಗರ ನಿವಾಸಕ್ಕೆ ಹಿರಿಯ ಶಾಸಕರ ದಂಡೇ ಆಗಮಿಸುತ್ತಿದೆ. ಸರ್, ನಮ್ಮನ್ನು ಕೈ ಬಿಡಬೇಡಿ ಸರ್, ನಿಮ್ಮನ್ನೇ ನಂಬಿಕೊಂಡಿದ್ದೇವೆ, ಮಂತ್ರಿ ಮಂಡಲದಲ್ಲಿ ನಮಗೊಂದು ಚಾನ್ಸ್ ಕೊಡಿ ಎಂದು ಮುಖ್ಯಮಂತ್ರಿಗೆ ದುಂಬಾಲು ಬೀಳುತ್ತಿರುವುದು ಸಾಮಾನ್ಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT