ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ನಾಯಕರು 
ರಾಜಕೀಯ

ಬೊಮ್ಮಾಯಿ ಸಂಪುಟ ಸೇರಲು ಲಾಬಿ: ಯಡಿಯೂರಪ್ಪರನ್ನು ಭೇಟಿಯಾದ ಬಿಜೆಪಿ ಶಾಸಕರು

ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿರುವ ಬಸವರಾಜ ಬೊಮ್ಮಾಯಿಯವರಿಗೆ ಸಂಪುಟ ರಚನೆಯ ಸವಾಲು ಎದುರಾಗಿದ್ದು, ವರಿಷ್ಠರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. 

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿರುವ ಬಸವರಾಜ ಬೊಮ್ಮಾಯಿಯವರಿಗೆ ಸಂಪುಟ ರಚನೆಯ ಸವಾಲು ಎದುರಾಗಿದ್ದು, ವರಿಷ್ಠರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. 

ಈ ನಡುವೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬೊಮ್ಮಾಯಿ ಸಂಪುಟ ಸೇರಲು ಶಾಸಕರು ಬಿಎಸ್​ವೈ ಜೊತೆ ಲಾಬಿ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ. 

ತೀರ್ಥಹಳ್ಳಿ ಶಾಸಕ ಅರಗ ಜ್ಞಾ‌ನೇಂದ್ರ ಹಾಗೂ ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಬೆಂಬಲಿಗರ ಜೊತೆ ಆಗಮಿಸಿ ಇಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಸಂಪುಟದಲ್ಲಿ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕ ಅರಗ ಜ್ಞಾನೇಂದ್ರ ಅವರು, ಯಡಿಯೂರಪ್ಪನವರ ಭೇಟಿಯಲ್ಲಿ ವಿಶೇಷವೇನಿಲ್ಲ. ಬೆಂಗಳೂರಿಗೆ ಬಂದಾಗಲೆಲ್ಲಾ ಯಡಿಯೂರಪ್ಪನವರನ್ನು ಭೇಟಿ ಮಾಡುತ್ತೇನೆ. ನನ್ನನ್ನು ಸಚಿವ ಸಂಪುಟಕ್ಕೆ ಸೇರಿಸದಿರಲು ಯಾವುದೇ ಕಾರಣಗಳು ಇಲ್ಲ. ಯಡಿಯೂರಪ್ಪನವರಿಗೆ ನನ್ನ ಮೇಲೆ ಅನುಕಂಪ ಇದೆ. ನಾನು ಅವರ ಜೊತೆ ಜೊತೆಯಲ್ಲಿ ಬೆಳೆದವನು. ನನ್ನನ್ನು ಬಿಎಸ್​ವೈ ಗುರುತಿಸುತ್ತಾರೆ, ಸಂಘ ಸಹ ಗುರುತಿಸುತ್ತದೆ. ಈ ಬಾರಿ ಸಚಿವನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!