ಕೆ.ಎಸ್.ಈಶ್ವರಪ್ಪ 
ರಾಜಕೀಯ

ಸಂಪುಟ ರಚನೆ ಕುರಿತು ಯತ್ನಾಳ್ ಬೆದರಿಕೆ ಹಾಕಬಾರದು: ಕೆ.ಎಸ್.ಈಶ್ವರಪ್ಪ

ವಿಜಯಪುರದ ಜಿಲ್ಲೆಯವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಿದ್ದರೆ, ಬಿಜೆಪಿ ಸರ್ವನಾಶವಾಗುತ್ತದೆ ಎಂಬ ಬೆದರಿಕೆಯ ಹೇಳಿಕೆಗಳನ್ನು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ನೀಡುವುದು ಸರಿಯಲ್ಲ ಎಂದು ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. 

ವಿಜಯಪುರ: ವಿಜಯಪುರದ ಜಿಲ್ಲೆಯವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಿದ್ದರೆ, ಬಿಜೆಪಿ ಸರ್ವನಾಶವಾಗುತ್ತದೆ ಎಂಬ ಬೆದರಿಕೆಯ ಹೇಳಿಕೆಗಳನ್ನು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ನೀಡುವುದು ಸರಿಯಲ್ಲ ಎಂದು ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸ್ನೇಹಿತನಾಗಿ ಹೇಳುತ್ತೇನೆ. ಬಹಿರಂಗ ಹೇಳಿಕೆ ‌ಕೊಟ್ಟು ಅವರೇ ಹಾಳಾಗುತ್ತಿದ್ದಾರೆ. ಅವರು ನನ್ನ ಆತ್ಮೀಯ ಸ್ನೇಹಿತ. ಹಾಗಾಗಿ ಬಹಿರಂಗ ಹೇಳಿಕೆ ಕೊಡುವುದನ್ನು ತಕ್ಷಣ ನಿಲ್ಲಿಸಬೇಕೆಂದು ಬುದ್ದಿವಾದ ಹೇಳಿದ್ದಾರೆ.

ಕೇಂದ್ರೀಯ ನಾಯಕರು ರಾಜ್ಯದಲ್ಲಿ ಕಳೆದ ಮೂರುಗಳಿಂದ ಇದ್ದು, ಶಾಸಕರು ಅವರೊಂದಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದೆ. ತಮ್ಮ ದೂರುಗಳನ್ನು ಅವರ ಬಳಿ ಏಕೆ ಯತ್ನಾಳ್ ಹೇಳುತ್ತಿಲ್ಲ? ಸಾಕಷ್ಟು ಬಾರಿ ನಾನು ಯತ್ನಾಳ್ ಜೊತೆಗೆ ಮಾತನಾಡಿದ್ದೇನೆ. ಪಕ್ಷದ ನಿರ್ಧಾರಕ್ಕೆ ತಲೆಬಾಗುವಂತೆ ತಿಳಿಸಿದ್ದೇನೆ. ಮತ್ತೊಮ್ಮೆ ಮಾತನಾಡುವ ಪ್ರಯತ್ನ ಮಾಡುತ್ತೇನೆಂದು ತಿಳಿಸಿದ್ದಾರೆ. 

ಬೊಮ್ಮಾಯಿಯವರ ಉತ್ತಮ ಆಡಳಿತದ ಜೊತೆಗೆ ಮುಂದಿನ ಚುನಾವಣೆ ಎದುರಿಸುತ್ತೇನೆ. ಬಹುಮತ ಪಡೆಯುವತ್ತ ಶ್ರಮ ಪಡುತ್ತೇನೆ. ಆಡಳಿತ ಪಕ್ಷವಾಗಿದ್ದರೂ, ಬಿಜೆಪಿಗೆ ಬಹುಮತ ಪಡೆಯಲು ಸಾಧ್ಯವಾಗುತ್ತಿಲ್ಲ. ಯಾವುದೇ ಪಕ್ಷದ ಸಹಾಯ ಅಥವಾ ನಾಯಕರ ಸಹಾಯವಿಲ್ಲದೆ ಸರ್ಕಾರ ರಚನೆ ಮಾಡುವುದನ್ನು ನಾವು ಬಯಸುತ್ತಿದ್ದೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!