ಕೆ.ಎಸ್.ಈಶ್ವರಪ್ಪ 
ರಾಜಕೀಯ

ಸಂಪುಟ ರಚನೆ ಕುರಿತು ಯತ್ನಾಳ್ ಬೆದರಿಕೆ ಹಾಕಬಾರದು: ಕೆ.ಎಸ್.ಈಶ್ವರಪ್ಪ

ವಿಜಯಪುರದ ಜಿಲ್ಲೆಯವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಿದ್ದರೆ, ಬಿಜೆಪಿ ಸರ್ವನಾಶವಾಗುತ್ತದೆ ಎಂಬ ಬೆದರಿಕೆಯ ಹೇಳಿಕೆಗಳನ್ನು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ನೀಡುವುದು ಸರಿಯಲ್ಲ ಎಂದು ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. 

ವಿಜಯಪುರ: ವಿಜಯಪುರದ ಜಿಲ್ಲೆಯವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಿದ್ದರೆ, ಬಿಜೆಪಿ ಸರ್ವನಾಶವಾಗುತ್ತದೆ ಎಂಬ ಬೆದರಿಕೆಯ ಹೇಳಿಕೆಗಳನ್ನು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ನೀಡುವುದು ಸರಿಯಲ್ಲ ಎಂದು ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸ್ನೇಹಿತನಾಗಿ ಹೇಳುತ್ತೇನೆ. ಬಹಿರಂಗ ಹೇಳಿಕೆ ‌ಕೊಟ್ಟು ಅವರೇ ಹಾಳಾಗುತ್ತಿದ್ದಾರೆ. ಅವರು ನನ್ನ ಆತ್ಮೀಯ ಸ್ನೇಹಿತ. ಹಾಗಾಗಿ ಬಹಿರಂಗ ಹೇಳಿಕೆ ಕೊಡುವುದನ್ನು ತಕ್ಷಣ ನಿಲ್ಲಿಸಬೇಕೆಂದು ಬುದ್ದಿವಾದ ಹೇಳಿದ್ದಾರೆ.

ಕೇಂದ್ರೀಯ ನಾಯಕರು ರಾಜ್ಯದಲ್ಲಿ ಕಳೆದ ಮೂರುಗಳಿಂದ ಇದ್ದು, ಶಾಸಕರು ಅವರೊಂದಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದೆ. ತಮ್ಮ ದೂರುಗಳನ್ನು ಅವರ ಬಳಿ ಏಕೆ ಯತ್ನಾಳ್ ಹೇಳುತ್ತಿಲ್ಲ? ಸಾಕಷ್ಟು ಬಾರಿ ನಾನು ಯತ್ನಾಳ್ ಜೊತೆಗೆ ಮಾತನಾಡಿದ್ದೇನೆ. ಪಕ್ಷದ ನಿರ್ಧಾರಕ್ಕೆ ತಲೆಬಾಗುವಂತೆ ತಿಳಿಸಿದ್ದೇನೆ. ಮತ್ತೊಮ್ಮೆ ಮಾತನಾಡುವ ಪ್ರಯತ್ನ ಮಾಡುತ್ತೇನೆಂದು ತಿಳಿಸಿದ್ದಾರೆ. 

ಬೊಮ್ಮಾಯಿಯವರ ಉತ್ತಮ ಆಡಳಿತದ ಜೊತೆಗೆ ಮುಂದಿನ ಚುನಾವಣೆ ಎದುರಿಸುತ್ತೇನೆ. ಬಹುಮತ ಪಡೆಯುವತ್ತ ಶ್ರಮ ಪಡುತ್ತೇನೆ. ಆಡಳಿತ ಪಕ್ಷವಾಗಿದ್ದರೂ, ಬಿಜೆಪಿಗೆ ಬಹುಮತ ಪಡೆಯಲು ಸಾಧ್ಯವಾಗುತ್ತಿಲ್ಲ. ಯಾವುದೇ ಪಕ್ಷದ ಸಹಾಯ ಅಥವಾ ನಾಯಕರ ಸಹಾಯವಿಲ್ಲದೆ ಸರ್ಕಾರ ರಚನೆ ಮಾಡುವುದನ್ನು ನಾವು ಬಯಸುತ್ತಿದ್ದೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT