ವಿಜೇತಾ ಅನಂತ್ ಕುಮಾರ್ 
ರಾಜಕೀಯ

ನನ್ನ ಹೇಳಿಕೆ ರಾಜಕೀಯ ಅವಲೋಕನವೇ ಹೊರತು ಸೈದ್ಧಾಂತಿಕ ಅನುಮೋದನೆಯಲ್ಲ: ಟ್ವೀಟ್ ಬಗ್ಗೆ ಅನಂತ್ ಪುತ್ರಿ ಸ್ಪಷ್ಟನೆ

ಜೆಡಿಎಸ್ ಕುರಿತು ಇತ್ತೀಚೆಗೆ ವ್ಯಕ್ತಪಡಿಸಿದ್ದ ಅಭಿಪ್ರಾಯ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆ ಕುರಿತು ಕೇಂದ್ರದ ಮಾಜಿ ಸಚಿವ, ದಿ. ಅನಂತಕುಮಾರ್ ಪುತ್ರಿ ವಿಜೇತಾ ಅನಂತಕುಮಾರ್ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ

ಬೆಂಗಳೂರು: ಜೆಡಿಎಸ್ ಕುರಿತು ಇತ್ತೀಚೆಗೆ ವ್ಯಕ್ತಪಡಿಸಿದ್ದ ಅಭಿಪ್ರಾಯ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆ ಕುರಿತು ಕೇಂದ್ರದ ಮಾಜಿ ಸಚಿವ, ದಿ. ಅನಂತಕುಮಾರ್ ಪುತ್ರಿ ವಿಜೇತಾ ಅನಂತಕುಮಾರ್ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ನಾನು ಮಾಡಿದ ಟ್ವೀಟೊಂದು ಊಹಾಪೋಹಗಳಿಗೆ ಕಾರಣವಾಗಿದೆ. ಈಗ ನಾನು ಪ್ರಕಟಿಸಿರುವ ಸಂದೇಶವು ಗೊಂದಲಗಳಿಗೆ ತೆರೆ ಎಳೆಯಲಿದ್ದು ಚರ್ಚೆಯನ್ನು ಇಲ್ಲಿಗೆ ಮುಕ್ತಾಯಗೊಳಿಸಲಿದೆ. ನಿಮ್ಮೆಲ್ಲರೊಂದಿಗೆ ಇಲ್ಲಿ ಸಂವಹನ ನಡೆಸಲು ಇಷ್ಟಪಡುತ್ತೇನೆ ಮತ್ತು ಅದನ್ನು ಮುಂದುವರಿಸುತ್ತೇನೆ’ ಎಂದು ವಿಜೇತಾ ಟ್ವೀಟ್ ಮಾಡಿದ್ದಾರೆ.

‘ರಾಜಕೀಯದಲ್ಲಿ ಸಿದ್ಧಾಂತ ಮತ್ತು ವಿಶ್ಲೇಷಣೆ ಅಥವಾ ಅವಲೋಕನಗಳು ಇರುತ್ತವೆ. ಸಾಮಾನ್ಯವಾಗಿ ಇವುಗಳನ್ನು ಒಂದೇ ಎಂದು ಭಾವಿಸಿ ಗೊಂದಲಕ್ಕೆ ಒಳಗಾಗುತ್ತೇವೆ. ರಾಜಕೀಯದ ಕಲಿಕೆ ಬಗ್ಗೆ ಆಸಕ್ತಿಯುಳ್ಳವಳಾಗಿ ಇದು (ಜೆಡಿಎಸ್‌ ಕುರಿತ ಹೇಳಿಕೆ) ನನ್ನ ರಾಜಕೀಯ ಅವಲೋಕನವೇ ಹೊರತು ಸೈದ್ಧಾಂತಿಕ ಅನುಮೋದನೆಯಲ್ಲ. ನನ್ನ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ನನ್ನ ಕುಟುಂಬದ ಸದಸ್ಯರ ಕಲ್ಪನೆಯೊಟ್ಟಿಗೆ ತಳಕು ಹಾಕುವುದು ಅನ್ಯಾಯವಾಗಿದೆ.

ಸುಮಾರು 35 ವರ್ಷಗಳಿಂದ ನನ್ನ ತಂದೆಯವರು ಲಕ್ಷಾಂತರ ಕಾರ್ಯಕರ್ತರ ಸಹಕಾರದೊಂದಿಗೆ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ತಾಯಿ ಹಸಿವು, ಪೌಷ್ಟಿಕತೆ, ಪರಿಸರ ಕ್ಷೇತ್ರಗಳಲ್ಲಿ ಮತ್ತು ಪಕ್ಷಕ್ಕಾಗಿ ಅವಿರತವಾಗಿ ದುಡಿಯುತ್ತಿದ್ದಾರೆ. ನೀವು ರಾಜಕೀಯ ಪ್ರವೇಶಿಸಲಿದ್ದೀರಾ ಎಂದು ಅನೇಕರು ನನ್ನನ್ನು ಪ್ರಶ್ನಿಸಿದ್ದಾರೆ. ಒಬ್ಬ ವ್ಯಕ್ತಿಯ ರಾಜಕೀಯ ಪಯಣವು ಈ ರೀತಿ ಆರಂಭವಾಗಬಾರದು ಎಂದು ನಾನು ಭಾವಿಸುತ್ತೇನೆ. ಅದು ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುವಲ್ಲಿಂದ ಶುರುವಾಗಬೇಕು. ಕಾರ್ಯಕರ್ತರ ಬೆಂಬಲ
ಮತ್ತು ಅವರಿಂದ ದೊರೆಯುವ ಪಾಠ ನಿಮ್ಮನ್ನು ನಾಯಕನನ್ನಾಗಿ ಮಾಡುತ್ತದೆ.

ಯಾರೂ ಶತ್ರುಗಳಲ್ಲ ಹಾಗೂ ಪರಸ್ಪರ ಗೌರವಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಭೂತ ವಿಚಾರ ಎಂದು ಅಪ್ಪ ನನಗೆ ಕಲಿಸಿದ್ದರು. ನನ್ನ ಗೌರವದ ಅಭಿವ್ಯಕ್ತಿಯನ್ನು ಯಾವುದೋ ಪಕ್ಷ ಸೇರುತ್ತೇನೆ ಎಂದು ತಪ್ಪಾಗಿ ಭಾವಿಸಬಾರದು. ನಾನು ಕ್ರಮಿಸಬೇಕಾದ ಹಾದಿ ಬಲು ದೂರವಿದೆ. ನನ್ನ ತಾಯ್ನಾಡಿಗೆ ಸೇವೆ ಸಲ್ಲಿಸುವುದಕ್ಕಾಗಿ ಕಲಿಕೆಯನ್ನು ಹೆಚ್ಚಿಸಿಕೊಳ್ಳಲು ಬಯಸುತ್ತೇನೆ. ದೇಶ ಮೊದಲು’ ಎಂದು ಸಂದೇಶದಲ್ಲಿ ವಿಜೇತಾ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT