ವಿಜೇತಾ ಅನಂತ್ ಕುಮಾರ್ 
ರಾಜಕೀಯ

ನನ್ನ ಹೇಳಿಕೆ ರಾಜಕೀಯ ಅವಲೋಕನವೇ ಹೊರತು ಸೈದ್ಧಾಂತಿಕ ಅನುಮೋದನೆಯಲ್ಲ: ಟ್ವೀಟ್ ಬಗ್ಗೆ ಅನಂತ್ ಪುತ್ರಿ ಸ್ಪಷ್ಟನೆ

ಜೆಡಿಎಸ್ ಕುರಿತು ಇತ್ತೀಚೆಗೆ ವ್ಯಕ್ತಪಡಿಸಿದ್ದ ಅಭಿಪ್ರಾಯ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆ ಕುರಿತು ಕೇಂದ್ರದ ಮಾಜಿ ಸಚಿವ, ದಿ. ಅನಂತಕುಮಾರ್ ಪುತ್ರಿ ವಿಜೇತಾ ಅನಂತಕುಮಾರ್ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ

ಬೆಂಗಳೂರು: ಜೆಡಿಎಸ್ ಕುರಿತು ಇತ್ತೀಚೆಗೆ ವ್ಯಕ್ತಪಡಿಸಿದ್ದ ಅಭಿಪ್ರಾಯ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆ ಕುರಿತು ಕೇಂದ್ರದ ಮಾಜಿ ಸಚಿವ, ದಿ. ಅನಂತಕುಮಾರ್ ಪುತ್ರಿ ವಿಜೇತಾ ಅನಂತಕುಮಾರ್ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ನಾನು ಮಾಡಿದ ಟ್ವೀಟೊಂದು ಊಹಾಪೋಹಗಳಿಗೆ ಕಾರಣವಾಗಿದೆ. ಈಗ ನಾನು ಪ್ರಕಟಿಸಿರುವ ಸಂದೇಶವು ಗೊಂದಲಗಳಿಗೆ ತೆರೆ ಎಳೆಯಲಿದ್ದು ಚರ್ಚೆಯನ್ನು ಇಲ್ಲಿಗೆ ಮುಕ್ತಾಯಗೊಳಿಸಲಿದೆ. ನಿಮ್ಮೆಲ್ಲರೊಂದಿಗೆ ಇಲ್ಲಿ ಸಂವಹನ ನಡೆಸಲು ಇಷ್ಟಪಡುತ್ತೇನೆ ಮತ್ತು ಅದನ್ನು ಮುಂದುವರಿಸುತ್ತೇನೆ’ ಎಂದು ವಿಜೇತಾ ಟ್ವೀಟ್ ಮಾಡಿದ್ದಾರೆ.

‘ರಾಜಕೀಯದಲ್ಲಿ ಸಿದ್ಧಾಂತ ಮತ್ತು ವಿಶ್ಲೇಷಣೆ ಅಥವಾ ಅವಲೋಕನಗಳು ಇರುತ್ತವೆ. ಸಾಮಾನ್ಯವಾಗಿ ಇವುಗಳನ್ನು ಒಂದೇ ಎಂದು ಭಾವಿಸಿ ಗೊಂದಲಕ್ಕೆ ಒಳಗಾಗುತ್ತೇವೆ. ರಾಜಕೀಯದ ಕಲಿಕೆ ಬಗ್ಗೆ ಆಸಕ್ತಿಯುಳ್ಳವಳಾಗಿ ಇದು (ಜೆಡಿಎಸ್‌ ಕುರಿತ ಹೇಳಿಕೆ) ನನ್ನ ರಾಜಕೀಯ ಅವಲೋಕನವೇ ಹೊರತು ಸೈದ್ಧಾಂತಿಕ ಅನುಮೋದನೆಯಲ್ಲ. ನನ್ನ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ನನ್ನ ಕುಟುಂಬದ ಸದಸ್ಯರ ಕಲ್ಪನೆಯೊಟ್ಟಿಗೆ ತಳಕು ಹಾಕುವುದು ಅನ್ಯಾಯವಾಗಿದೆ.

ಸುಮಾರು 35 ವರ್ಷಗಳಿಂದ ನನ್ನ ತಂದೆಯವರು ಲಕ್ಷಾಂತರ ಕಾರ್ಯಕರ್ತರ ಸಹಕಾರದೊಂದಿಗೆ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ತಾಯಿ ಹಸಿವು, ಪೌಷ್ಟಿಕತೆ, ಪರಿಸರ ಕ್ಷೇತ್ರಗಳಲ್ಲಿ ಮತ್ತು ಪಕ್ಷಕ್ಕಾಗಿ ಅವಿರತವಾಗಿ ದುಡಿಯುತ್ತಿದ್ದಾರೆ. ನೀವು ರಾಜಕೀಯ ಪ್ರವೇಶಿಸಲಿದ್ದೀರಾ ಎಂದು ಅನೇಕರು ನನ್ನನ್ನು ಪ್ರಶ್ನಿಸಿದ್ದಾರೆ. ಒಬ್ಬ ವ್ಯಕ್ತಿಯ ರಾಜಕೀಯ ಪಯಣವು ಈ ರೀತಿ ಆರಂಭವಾಗಬಾರದು ಎಂದು ನಾನು ಭಾವಿಸುತ್ತೇನೆ. ಅದು ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುವಲ್ಲಿಂದ ಶುರುವಾಗಬೇಕು. ಕಾರ್ಯಕರ್ತರ ಬೆಂಬಲ
ಮತ್ತು ಅವರಿಂದ ದೊರೆಯುವ ಪಾಠ ನಿಮ್ಮನ್ನು ನಾಯಕನನ್ನಾಗಿ ಮಾಡುತ್ತದೆ.

ಯಾರೂ ಶತ್ರುಗಳಲ್ಲ ಹಾಗೂ ಪರಸ್ಪರ ಗೌರವಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಭೂತ ವಿಚಾರ ಎಂದು ಅಪ್ಪ ನನಗೆ ಕಲಿಸಿದ್ದರು. ನನ್ನ ಗೌರವದ ಅಭಿವ್ಯಕ್ತಿಯನ್ನು ಯಾವುದೋ ಪಕ್ಷ ಸೇರುತ್ತೇನೆ ಎಂದು ತಪ್ಪಾಗಿ ಭಾವಿಸಬಾರದು. ನಾನು ಕ್ರಮಿಸಬೇಕಾದ ಹಾದಿ ಬಲು ದೂರವಿದೆ. ನನ್ನ ತಾಯ್ನಾಡಿಗೆ ಸೇವೆ ಸಲ್ಲಿಸುವುದಕ್ಕಾಗಿ ಕಲಿಕೆಯನ್ನು ಹೆಚ್ಚಿಸಿಕೊಳ್ಳಲು ಬಯಸುತ್ತೇನೆ. ದೇಶ ಮೊದಲು’ ಎಂದು ಸಂದೇಶದಲ್ಲಿ ವಿಜೇತಾ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT