ರಾಜಕೀಯ

ಸಹಕರಿಸಿದವರೆಲ್ಲರಿಗೂ ಧನ್ಯವಾದ ಹೇಳಿದ ಸುರೇಶ್ ಕುಮಾರ್

Lingaraj Badiger

ಬೆಂಗಳೂರು: ಹಿಂದಿನ ಬಿಎಸ್ ಯುಡಿಯೂರಪ್ಪ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಕೈ ಬಿಡಲಾಗಿದೆ. 

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಸುರೇಶ್ ಕುಮಾರ್ ಅವರು, ರಾಜ್ಯದ ಜನತೆಗೆ ಧನ್ಯವಾದ ಹೇಳಿದ್ದಾರೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇನ್ನು 29 ಶಾಸಕರು ಸಂಪುಟ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದರಲ್ಲಿ 8 ಲಿಂಗಾಯತ,  7 ಒಬಿಸಿ, 7 ಒಕ್ಕಲಿಗ, 3 ದಲಿತ, ಎಸ್ಟಿ ಮತ್ತು ರೆಡ್ಡಿ ತಲಾ 1, ಇಬ್ಬರು ಬ್ರಾಹ್ಮಣ ಹಾಗೂ ಒಬ್ಬ ಮಹಿಳೆಗೆ ಅವಕಾಶ ನೀಡಲಾಗಿದೆ.

SCROLL FOR NEXT