ಯಡಿಯೂರಪ್ಪ 
ರಾಜಕೀಯ

'ಸುಸೂತ್ರವಾಗಿ ನಡೆಯುತ್ತಿದ್ದ ಸರ್ಕಾರ ಬೀಳಿಸಿದ್ದಕ್ಕೆ, ಆಪರೇಷನ್ ಕಮಲದಂತಹ ಅನೈತಿಕತೆಗೆ ಬಿಜೆಪಿ  ಜನರ ಕ್ಷಮೆ ಕೇಳಲಿ'

ರಾಜ್ಯ ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಹರಿಹಾಯ್ದಿದೆ. ಸುಸೂತ್ರವಾಗಿ ನಡೆಯುತ್ತಿದ್ದ ಸರ್ಕಾರ ಬೀಳಿಸಿದ್ದಕ್ಕೆ, ಆಪರೇಷನ್ ಕಮಲದಂತಹ ಅನೈತಿಕತೆಗೆ ಬಿಜೆಪಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.

ಬೆಂಗಳೂರು: ರಾಜ್ಯ ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಹರಿಹಾಯ್ದಿದೆ. ಸುಸೂತ್ರವಾಗಿ ನಡೆಯುತ್ತಿದ್ದ ಸರ್ಕಾರ ಬೀಳಿಸಿದ್ದಕ್ಕೆ, ಆಪರೇಷನ್ ಕಮಲದಂತಹ ಅನೈತಿಕತೆಗೆ ಬಿಜೆಪಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ,

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಸಿಕ್ಕ ಅಧಿಕಾರಾವಧಿಯನ್ನು ಸಂಪುಟ ವಿಸ್ತರಣೆ, ಸಂಪುಟ ರಚನೆ, ನಾಯಕತ್ವ ಬದಲಾವಣೆ, ಆಂತರಿಕ ಕಲಹದಲ್ಲಿಯೇ ಕಳೆದಿದ್ದಕ್ಕೆ.ರಾಜ್ಯವನ್ನು ತನ್ನ ರಾಜಕೀಯ ಪ್ರಯೋಗಶಾಲೆ ಮಾಡಿಕೊಂಡಿದ್ದಕ್ಕೆ ಬಿಜೆಪಿ ರಾಜ್ಯದ ಜನರ ಬಳಿ ಕ್ಷಮೆ ಕೋರಬೇಕೆಂದು ಒತ್ತಾಯಿಸಿದೆ.

ನೆರೆ ಪರಿಹಾರ ಕೊಡದಿದ್ದಕ್ಕೆ, ಕೋವಿಡ್ ನಿರ್ವಹಣೆಯ ವೈಫಲ್ಯಕ್ಕೆ, ಕೇಂದ್ರದಿಂದ ನೆರೆ ಪರಿಹಾರ, ಜಿಎಸ್ ಟಿ ಬಾಕಿ ತರಲಾಗದಿದ್ದಕ್ಕೆ, ಶೈಕ್ಷಣಿಕ ಬಿಕ್ಕಟ್ಟು ಬಗೆಹರಿಸದಿದ್ದಕ್ಕೆ, ಅರಾಜಕತೆ ಸೃಷ್ಟಿಸಿದ್ದಕ್ಕೆ, ಭ್ರಷ್ಟಾಚಾರ ನಡೆಸಿದ್ದಕ್ಕೆ, ಸಮರ್ಪಕ ಸರ್ಕಾರ ನಡೆಸದಿದ್ದಕ್ಕೆ, ಲಸಿಕೆ ಕೊಡಲಾಗದಿದ್ದಕ್ಕೆ ಬಿಜೆಪಿ ಕರ್ನಾಟಕ ರಾಜ್ಯದ ಜನರ ಕ್ಷಮೆ ಕೋರಬೇಕೆಂದು ಹೇಳಿದೆ.

ಇದುವರೆಗೂ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದಕ್ಕೆ ಸ್ಪಷ್ಟ ಕಾರಣವನ್ನು ಅವರೂ ನೀಡಿಲ್ಲ, ಬಿಜೆಪಿಯೂ ನೀಡಿಲ್ಲ. ರಾಜ್ಯದ ಸಿಎಂ ರಾಜೀನಾಮೆ ನೀಡಿದ್ದೇಕೆ ಎಂಬ ಕಾರಣವನ್ನು ತಿಳಿದುಕೊಳ್ಳುವ ಹಕ್ಕು ಪ್ರತಿ ಪ್ರಜೆಗೂ ಇದೆ. ಹೀಗಾಗಿ ಕಾರಣ ಬಹಿರಂಗಪಡಿಸಲಿ ಹಾಗೂ ಸಂಕಷ್ಟದ ನಡುವೆ ರಾಜಕೀಯ ಅಸ್ಥಿರತೆ ಸೃಷ್ಟಿಸಿದ್ದಕ್ಕೆ ಜನರ ಕ್ಷಮೆ ಕೇಳಲಿ ಆಗ್ರಹ ಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT