ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

ನೂತನ ಸಚಿವರ ಪಟ್ಟಿ ಬೆಳಗ್ಗೆ 11.30ರೊಳಗೆ ರಾಜಭವನದಿಂದ ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ 

ರಾಜಭವನದಿಂದ ಬೆಳಗ್ಗೆ 11.30ರ ಒಳಗೆ ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲಿ ಸಂಭಾವ್ಯ ಸಚಿವರ ಹೆಸರುಗಳು ಕೇಳಿಬರುತ್ತಿವೆ. ಹೀಗಾಗಿ ನಾನು ಈಗ ಹೇಳುವುದಿಲ್ಲ. ರಾಜಭವನದಿಂದಲೇ ಬಿಡುಗಡೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ರಾಜಭವನದಿಂದ ಬೆಳಗ್ಗೆ 11.30ರ ಒಳಗೆ ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲಿ ಸಂಭಾವ್ಯ ಸಚಿವರ ಹೆಸರುಗಳು ಕೇಳಿಬರುತ್ತಿವೆ. ಹೀಗಾಗಿ ನಾನು ಈಗ ಹೇಳುವುದಿಲ್ಲ. ರಾಜಭವನದಿಂದಲೇ ಬಿಡುಗಡೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನೂತನ ಸಚಿವರ ಪಟ್ಟಿಯನ್ನು ರಾಜಭವನಕ್ಕೆ 11 ಗಂಟೆಯ ಹೊತ್ತಿಗೆ ನೀಡಲಾಗುತ್ತದೆ. ಬಳಿಕ ಕೆಲವೇ ಕ್ಷಣಗಳಲ್ಲಿ ರಾಜಭವನದಿಂದ ಅಧಿಕೃತ ಪಟ್ಟಿ ಹೊರಬೀಳಲಿದೆ. ಅಪರಾಹ್ನ 2.15ಕ್ಕೆ ನೂತನ ಸಚಿವರ ಪ್ರಮಾಣ ವಚನ ರಾಜಭವನದ ಗಾಜಿನ ಮನೆಯಲ್ಲಿ ನೆರವೇರಲಿದೆ ಎಂದರು.

ವಿಧಾನಸೌಧದಲ್ಲಿ ಹೇಳಿಕೆ: ನಂತರ ವಿಧಾನಸೌಧದ ಮುಂದೆ ಸುದ್ದಿಗಾರರ ಮುಂದೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ ಒಂದೆರಡು ವಿಷಯಗಳನ್ನು 10 ಗಂಟೆಗೆ ಎಲ್ಲರಿಗೂ ತಿಳಿಸುತ್ತೇನೆ. 11 ಗಂಟೆಯ ವೇಳೆಗೆ ಶುಭ ಸುದ್ದಿಗಳು ಹೊರಬೀಳಲಿದೆ ಎಂದರು. 

ಸಂಭಾವ್ಯ ಸಚಿವರ ಪಟ್ಟಿ: ಶ್ರೀರಾಮುಲು, ಅಂಗಾರ, ಪೂರ್ಣಿಮಾ ಶ್ರೀನಿವಾಸ್, ಉಮೇಶ್ ಕತ್ತಿ, ಡಾ ಸುಧಾಕರ್, ಎಸ್ ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್, ಕೆ ಎಸ್ ಈಶ್ವರಪ್ಪಪ್ಪ, ವಿ.ಸೋಮಣ್ಣ, ಗೋವಿಂದ ಕಾರಜೋಳ, ಮಾಧುಸ್ವಾಮಿ, ಆನಂದ್ ಸಿಂಗ್, ಬಿ.ಸಿ ಪಾಟೀಲ್, ಅಶ್ವಥನಾರಾಯಣ್, ಬೈರತಿ ಬಸವರಾಜ್, ಮುರುಗೇಶ್ ನಿರಾಣಿ, ಗೋಪಾಲಯ್ಯ, ಅರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಈಗಾಗಲೇ ಇವರೆಲ್ಲರಿಗೂ ವಿಧಾನಸೌಧಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳು ಕರೆ ಮಾಡಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. 

ಸಿ ಪಿ ಯೋಗೇಶ್ವರ್, ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಚಿವ ಸ್ಥಾನ ಸಿಗುವುದು ಸಂಶಯವಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT