ವಿ ಶ್ರೀನಿವಾಸ್ ಪ್ರಸಾದ್(ಸಂಗ್ರಹ ಚಿತ್ರ) 
ರಾಜಕೀಯ

ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ: ವಿ ಶ್ರೀನಿವಾಸ್ ಪ್ರಸಾದ್ ಘೋಷಣೆ

ಸಕ್ರಿಯ ರಾಜಕಾರಣಕ್ಕೆ ಚಾಮರಾಜನಗರ ಕ್ಷೇತ್ರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿವೃತ್ತಿ ಘೋಷಿಸಿದ್ದಾರೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.

ಮೈಸೂರು: ಸಕ್ರಿಯ ರಾಜಕಾರಣಕ್ಕೆ ಚಾಮರಾಜನಗರ ಕ್ಷೇತ್ರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿವೃತ್ತಿ ಘೋಷಿಸಿದ್ದಾರೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ವಿಶೇಷವಾಗಿ ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಹುಟ್ಟಿದ ದಿನವಾದ ಇಂದು ಅಂದರೆ ಆಗಸ್ಟ್ 6ರಂದು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ನನ್ನ ಆತ್ಮತೃಪ್ತಿಯಿಂದಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತಿದ್ದೇನೆ, ಈ ಬಗ್ಗೆ ಬೇಸರವಿಲ್ಲ, ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, 14 ಬಾರಿ ಚುನಾವಣೆಯಲ್ಲಿ ನಿಂತು ನನಗೆ ಸಾಕು ಅನಿಸಿದೆ. ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ಬೆಳವಣಿಗೆಗಳು ಬೇರೆ ತಿರುವು ಪಡೆದ ಕಾರಣ ಸ್ಪರ್ಧೆ ಮಾಡಬೇಕಾಯಿತು. ಈಗ ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ತೀರ್ಮಾನಿಸಿದ್ದೇನೆ, ನನ್ನ ನಿರ್ಧಾರವನ್ನು ಬದಲಿಸುವುದೂ ಇಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್​ ಪಕ್ಷದ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಇನ್ನು ಕೆಲವು ನಾಯಕರೊಂದಿಗೆ ಮನಸ್ತಾಪ ಉಂಟಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ವಿ.ಶ್ರೀನಿವಾಸ ಪ್ರಸಾದ್ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದರು.

ಇದು ನನ್ನ ಅಂತಿಮ ನಿಲುವು ಯಾವುದೇ ಕಾರಣಕ್ಕೂ ಇನ್ನು ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ‌ ಮಾತಿನಿಂದ ಹಿಂದೆ ಸರಿಯುವುದೂ ಇಲ್ಲ ಎಂದು ಹೇಳಿದ್ದಾರೆ. ನಾನು ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ. 50 ವರ್ಷದ ನನ್ನ ರಾಜಕೀಯ ಜೀವನದ ಪುಸ್ತಕ ಬಿಡುಗಡೆಯಾಗಲಿದ್ದು, ಅದರಲ್ಲಿ ನನ್ನ ರಾಜಕೀಯ ಜೀವನದ ಎಲ್ಲಾ ಏಳು ಬೀಳುಗಳನ್ನು ದಾಖಲಿಸಿದ್ದೇನೆ ಎಂದು ಸಹ ಪ್ರಕಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT