ರಾಜಕೀಯ

ಸಿಎಂ ಬೊಮ್ಮಾಯಿ ಭೇಟಿಯಾದ ಕೇಂದ್ರದ ಮಾಜಿ ಸಚಿವ ಶರದ್ ಪವಾರ್

Manjula VN

ಬೆಂಗಳೂರು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ. 

ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಪವಾರ್ ಅವರು, ಕುಟುಂಬ ಸದಸ್ಯರೊಬ್ಬರ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದ್ದಾರೆಂದು ಹೇಳಲಾಗುತ್ತಿದೆ. 

ಭೇಟಿ ವೇಳೆ ನೂತನ ಮುಖ್ಯಮಂತ್ರಿಗಳಿಗೆ ಪವಾರ್ ಅಭಿನಂದನೆ ಸಲ್ಲಿಸಿದ್ದು, ಕೆಲಕಾಲ ರಾಜಕೀಯ ವಿಚಾರಗಳ ಕುರಿತಂತೆಯೂ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಪವಾರ್ ಅವರು ಇನ್ನೂ 4-5 ದಿನಗಳ ಕಾಲ ಬೆಂಗಳೂರಿನಲ್ಲೇ ಉಳಿಯಲಿದ್ದಾರೆಂದು ತಿಳಿದುಬಂದಿದೆ. 

SCROLL FOR NEXT