ರಮೇಶ್ ಜಾರಕಿಹೊಳಿ 
ರಾಜಕೀಯ

ಮತ್ತೆ ರಮೇಶ್ ಜಾರಕಿಹೊಳಿ ಆ್ಯಕ್ಟೀವ್: ಮಾಜಿ ಸಚಿವರ ನಿವಾಸದಲ್ಲಿ ಮಿತ್ರ ಮಂಡಳಿಯ ಅತೃಪ್ತ ಶಾಸಕರ ಸಭೆ!

ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಅಸಮಾಧಾನಿತ ಶಾಸಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಗಾವಿ: ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಅಸಮಾಧಾನಿತ ಶಾಸಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಕಾಂಗ್ರೆಸ್ -ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಕೆಲ ಶಾಸಕರು ಶುಕ್ರವಾರ ರಾತ್ರಿ ಸಭೆ ಸೇರಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಶಾಸಕರು ಆಕ್ರೋಶಗೊಂಡಿದ್ದಾರೆ. ಅಶ್ಲೀಲ ಸಿಡಿ ಪ್ರಕರಣದಲ್ಲಿ ಜಲ ಸಂಪನ್ಮೂಲ ಖಾತೆಗೆ ರಮೇಶ್ ಜಾರಕಿಹೊಳಿ ರಾಜಿನಾಮೆ ನೀಡಿದ್ದು, ಕ್ಲೀನ್ ಚಿಟ್ ಗಾಗಿ ಕಾಯುತ್ತಿದ್ದಾರೆ. ಆದರೆ ತಮ್ಮ ಬದಲಿಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಜಾರಕಿಹೊಳಿ ಸಹೋದರರು ಬೇಡಿಕೆಯಿಟ್ಟಿದ್ದರು,

ಆದರೆ ಪಕ್ಷ ಜಾರಕಿಹೊಳಿ ಸಹೋದರರನ್ನು ನಿರ್ಲಕ್ಷ್ಯಿಸಿದೆ. ಹೀಗಾಗಿ ಅಸಮಾಧಾನಗೊಂಡಿದ್ದ ಹಲವು ಶಾಸಕರು  ಸಭೆಯಲ್ಲಿ ಭಾಗವಹಿಸಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ