ರಮೇಶ್ ಜಾರಕಿಹೊಳಿ 
ರಾಜಕೀಯ

ಮತ್ತೆ ರಮೇಶ್ ಜಾರಕಿಹೊಳಿ ಆ್ಯಕ್ಟೀವ್: ಮಾಜಿ ಸಚಿವರ ನಿವಾಸದಲ್ಲಿ ಮಿತ್ರ ಮಂಡಳಿಯ ಅತೃಪ್ತ ಶಾಸಕರ ಸಭೆ!

ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಅಸಮಾಧಾನಿತ ಶಾಸಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಗಾವಿ: ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಅಸಮಾಧಾನಿತ ಶಾಸಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಕಾಂಗ್ರೆಸ್ -ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಕೆಲ ಶಾಸಕರು ಶುಕ್ರವಾರ ರಾತ್ರಿ ಸಭೆ ಸೇರಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಶಾಸಕರು ಆಕ್ರೋಶಗೊಂಡಿದ್ದಾರೆ. ಅಶ್ಲೀಲ ಸಿಡಿ ಪ್ರಕರಣದಲ್ಲಿ ಜಲ ಸಂಪನ್ಮೂಲ ಖಾತೆಗೆ ರಮೇಶ್ ಜಾರಕಿಹೊಳಿ ರಾಜಿನಾಮೆ ನೀಡಿದ್ದು, ಕ್ಲೀನ್ ಚಿಟ್ ಗಾಗಿ ಕಾಯುತ್ತಿದ್ದಾರೆ. ಆದರೆ ತಮ್ಮ ಬದಲಿಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಜಾರಕಿಹೊಳಿ ಸಹೋದರರು ಬೇಡಿಕೆಯಿಟ್ಟಿದ್ದರು,

ಆದರೆ ಪಕ್ಷ ಜಾರಕಿಹೊಳಿ ಸಹೋದರರನ್ನು ನಿರ್ಲಕ್ಷ್ಯಿಸಿದೆ. ಹೀಗಾಗಿ ಅಸಮಾಧಾನಗೊಂಡಿದ್ದ ಹಲವು ಶಾಸಕರು  ಸಭೆಯಲ್ಲಿ ಭಾಗವಹಿಸಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT