ಸಚಿವೆ ಶಶಿಕಲಾ ಜೊಲ್ಲೆ 
ರಾಜಕೀಯ

ರಾಜಕೀಯವಾಗಿ ನನ್ನನ್ನು ತುಳಿಯಲು ಹೆಣೆದಿರುವ ಷಡ್ಯಂತ್ರವಿದು, ತನಿಖೆ ಎದುರಿಸಲು ಸಿದ್ದ: ಶಶಿಕಲಾ ಜೊಲ್ಲೆ

ಪಕ್ಷದ ರಾಷ್ಟ್ರೀಯ ವರಿಷ್ಠರು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಆಶೀರ್ವಾದದಿಂದ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ವಿಶ್ವಾಸದಿಂದ ಎರಡನೇ ಬಾರಿ ಸಚಿವೆಯಾಗಲು ನನಗೆ ಅವಕಾಶ ನೀಡಿದ್ದಾರೆ, ರಾಜ್ಯಾದ್ಯಂತ ಪ್ರವಾಸ ಮಾಡಿ ನಮ್ಮ ಇಲಾಖೆಗೆ ಸಂಬಂಧಪಟ್ಟ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿ: ಪಕ್ಷದ ರಾಷ್ಟ್ರೀಯ ವರಿಷ್ಠರು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಆಶೀರ್ವಾದದಿಂದ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ವಿಶ್ವಾಸದಿಂದ ಎರಡನೇ ಬಾರಿ ಸಚಿವೆಯಾಗಲು ನನಗೆ ಅವಕಾಶ ನೀಡಿದ್ದಾರೆ, ರಾಜ್ಯಾದ್ಯಂತ ಪ್ರವಾಸ ಮಾಡಿ ನಮ್ಮ ಇಲಾಖೆಗೆ ಸಂಬಂಧಪಟ್ಟ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾವ ಇಲಾಖೆಯ ಜವಾಬ್ದಾರಿ ನೀಡುತ್ತಾರೋ ಆ ಇಲಾಖೆಯ ಕೆಲಸಗಳನ್ನು ಮತ್ತು ಪಕ್ಷ ಸಂಘಟನೆಯ ಕೆಲಸಗಳನ್ನು ಮಾಡಿಕೊಂಡು ಹೋಗುತ್ತೇನೆ. ನನ್ನ ಕ್ಷೇತ್ರದಲ್ಲಿ ಪ್ರವಾಹದಿಂದ ಬಹಳಷ್ಟು ಹಾನಿಯಾಗಿದೆ, ನಾಳೆ ಅಲ್ಲಿಗೆ ಸಹ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಜನರಿಗೆ ಸಹಾಯ ಮಾಡುತ್ತೇನೆ ಎಂದರು.

ಕೊರೋನಾ ಮಹಾರಾಷ್ಟ್ರದಲ್ಲಿ ಹೆಚ್ಚಾಗಿರುವುದರಿಂದ ಗಡಿಭಾಗದಲ್ಲಿ ಸಂಚರಿಸುವವರ ಬಗ್ಗೆ ನಿಗಾ ವಹಿಸಲು ವಿಜಯಪುರ ಸೇರಿದಂತೆ ಗಡಿ ಪ್ರದೇಶಗಳಿಗೂ ಇಂದು ಭೇಟಿ ನೀಡುತ್ತೇನೆ ಎಂದರು.

ರಾಜಕೀಯ ಷಡ್ಯಂತ್ರ: ತಮ್ಮ ಮೇಲೆ ಬಂದಿರುವ ಮೊಟ್ಟೆ ಖರೀದಿ ಅವ್ಯವಹಾರ ಆರೋಪಕ್ಕೆ ಸಂಬಂಧಪಟ್ಟಂತೆ ಏನೂ ಪ್ರತಿಕ್ರಿಯೆ ನೀಡುವುದಿಲ್ಲ. ರಾಜಕೀಯದಲ್ಲಿದ್ದಾಗ ಹೆಣ್ಣು ಮಕ್ಕಳು ಈ ಸ್ಥಾನಕ್ಕೆ ಬಂದು ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿರುವಾಗ ಅನೇಕ ಶತ್ರುಗಳು, ಹಿತಶತ್ರುಗಳು ಇರುತ್ತಾರೆ, ಮುಂದೆ ಹೋಗಬಾರದೆಂದು ಷಡ್ಯಂತ್ರ ಮಾಡಿರುತ್ತಾರೆ. ಅವ್ಯವಹಾರ ಆರೋಪದ ಬಗ್ಗೆ ಯಾವುದೇ ತನಿಖೆಯಾದರೂ ಎದುರಿಸಲು ಸಿದ್ದಳಿದ್ದೇನೆ ಎಂದರು.

ನಾನು ಯಾವುದೇ ತಪ್ಪು ಮಾಡಿಲ್ಲ, ತಪ್ಪು ಮಾಡುವ ಅಗತ್ಯವೂ ಇಲ್ಲ, ತನಿಖೆಯಾಗಿ ವರದಿ ಹೊರಬರಲಿ, ಎಲ್ಲವನ್ನೂ ಎದುರಿಸಲು ಸಿದ್ದಳಿದ್ದೇನೆ. ನಾನು ಯಾವುದೇ ಅವ್ಯವಹಾರ ಮಾಡಿಲ್ಲ, ನನ್ನ ವಿರುದ್ಧ ಆರೋಪ ಮಾಡೋದಿಕ್ಕೆ ಶತ್ರುಗಳು ನಡೆಸಿರುವ ಷಡ್ಯಂತ್ರವನ್ನು ಹೆಣೆದಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಇದು ನನ್ನ ಮನದ ಆಸೆ’: ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ'.. 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಾರೆ': ನಟಿ ಆಕ್ರೋಶ! VIDEO

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI vs ಇಂಗ್ಲೆಂಡ್; ಕೋಚ್ ಗೌತಮ್ ಗಂಭೀರ್‌ಗೆ ಕಠಿಣ ಸವಾಲು

T20 ವಿಶ್ವಕಪ್ 2026: 8 ಸಿಕ್ಸರ್ 10 ಬೌಂಡರಿ.. ವೇಗದ ಶತಕ: ವಿಂಡೀಸ್ ದೈತ್ಯ chris gayle ದಾಖಲೆ ಮುರಿದ Finn Allen!

SCROLL FOR NEXT