ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

'ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ'; ರೆಬೆಲ್ ನಾಯಕರಿಗೆ ಸಿಎಂ ಬೊಮ್ಮಾಯಿ ಖಡಕ್ ಮಾತು

ಸಂಪುಟ ರಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನಲೆಯಲ್ಲಿ ಖಡಕ್ ತಿರುಗೇಟು ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು:  ಸಂಪುಟ ರಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನಲೆಯಲ್ಲಿ ಖಡಕ್ ತಿರುಗೇಟು ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಚಿವ ಸ್ಥಾನ ನೀಡಲು ಮತ್ತು ಅವರು ಬಯಸಿದ ಖಾತೆಗಳನ್ನು ನೀಡಲು ಸಾಧ್ಯವಿಲ್ಲ. ಖಾತೆ ಬಗ್ಗೆ ಗೊಂದಲವಿದ್ದರೆ ಈ ಬಗ್ಗೆ ಸಚಿವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.

ಈ ಹಿಂದೆ ಖಾತೆ ಹಂಚಿಕೆ ವಿಚಾರವಾಗಿ ಸಚಿವ ಆನಂದ್ ಸಿಂಗ್ ರ ಹೇಳಿಕೆ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, 'ಪ್ರತಿಯೊಬ್ಬರೂ ತಮಗೆ ಬೇಕಾದ ಖಾತೆಗಳನ್ನು ಪಡೆಯಲು ಸಾಧ್ಯವಿಲ್ಲ. ಸಚಿವ ಆನಂದ್ ಸಿಂಗ್ ನನಗೆ ಹತ್ತಿರವಾಗಿದ್ದಾರೆ. ಹಾಗಾಗಿ ಎಲ್ಲವೂ ಚೆನ್ನಾಗಿರುತ್ತದೆ. ನಾನು ಅವರನ್ನು ಕರೆದು ಮಾತನಾಡಿದೆ. ನಾನು ಅದನ್ನು ನಿಭಾಯಿಸುತ್ತೇನೆ ಎಂದು ಹೇಳಿದರು.

ಹೊಸದಾಗಿ ನೇಮಕಗೊಂಡ ಕರ್ನಾಟಕದ ಸಚಿವ ಆನಂದ್ ಸಿಂಗ್ ಅವರಿಗೆ ಅರಣ್ಯ, ಪರಿಸರ ಮತ್ತು ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ.  ಈ ಕುರಿತು ಮಾತನಾಡಿದ್ದ ಆನಂದ್ ಸಿಂಗ್ ಅವರು, "ನಾನು ಈ ಖಾತೆಯನ್ನು ಕೇಳಿಲ್ಲ. ಪಕ್ಷದ ವೇದಿಕೆಯಲ್ಲಿ ನಾನು ಮಾಡಿದ ಯಾವುದೇ ವಿನಂತಿಯನ್ನು ಪರಿಗಣಿಸಲಾಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಭೇಟಿ ಮಾಡಲು ನಾನು ಯೋಜಿಸುತ್ತಿದ್ದೇನೆ . ನನ್ನ ವಿನಂತಿಯನ್ನು ಮರುಪರಿಶೀಲಿಸುವಂತೆ ನಾನು ವಿನಂತಿಸುತ್ತೇನೆ ಎಂದು ಹೇಳಿದ್ದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT