ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

'ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ'; ರೆಬೆಲ್ ನಾಯಕರಿಗೆ ಸಿಎಂ ಬೊಮ್ಮಾಯಿ ಖಡಕ್ ಮಾತು

ಸಂಪುಟ ರಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನಲೆಯಲ್ಲಿ ಖಡಕ್ ತಿರುಗೇಟು ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು:  ಸಂಪುಟ ರಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನಲೆಯಲ್ಲಿ ಖಡಕ್ ತಿರುಗೇಟು ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಚಿವ ಸ್ಥಾನ ನೀಡಲು ಮತ್ತು ಅವರು ಬಯಸಿದ ಖಾತೆಗಳನ್ನು ನೀಡಲು ಸಾಧ್ಯವಿಲ್ಲ. ಖಾತೆ ಬಗ್ಗೆ ಗೊಂದಲವಿದ್ದರೆ ಈ ಬಗ್ಗೆ ಸಚಿವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.

ಈ ಹಿಂದೆ ಖಾತೆ ಹಂಚಿಕೆ ವಿಚಾರವಾಗಿ ಸಚಿವ ಆನಂದ್ ಸಿಂಗ್ ರ ಹೇಳಿಕೆ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, 'ಪ್ರತಿಯೊಬ್ಬರೂ ತಮಗೆ ಬೇಕಾದ ಖಾತೆಗಳನ್ನು ಪಡೆಯಲು ಸಾಧ್ಯವಿಲ್ಲ. ಸಚಿವ ಆನಂದ್ ಸಿಂಗ್ ನನಗೆ ಹತ್ತಿರವಾಗಿದ್ದಾರೆ. ಹಾಗಾಗಿ ಎಲ್ಲವೂ ಚೆನ್ನಾಗಿರುತ್ತದೆ. ನಾನು ಅವರನ್ನು ಕರೆದು ಮಾತನಾಡಿದೆ. ನಾನು ಅದನ್ನು ನಿಭಾಯಿಸುತ್ತೇನೆ ಎಂದು ಹೇಳಿದರು.

ಹೊಸದಾಗಿ ನೇಮಕಗೊಂಡ ಕರ್ನಾಟಕದ ಸಚಿವ ಆನಂದ್ ಸಿಂಗ್ ಅವರಿಗೆ ಅರಣ್ಯ, ಪರಿಸರ ಮತ್ತು ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ.  ಈ ಕುರಿತು ಮಾತನಾಡಿದ್ದ ಆನಂದ್ ಸಿಂಗ್ ಅವರು, "ನಾನು ಈ ಖಾತೆಯನ್ನು ಕೇಳಿಲ್ಲ. ಪಕ್ಷದ ವೇದಿಕೆಯಲ್ಲಿ ನಾನು ಮಾಡಿದ ಯಾವುದೇ ವಿನಂತಿಯನ್ನು ಪರಿಗಣಿಸಲಾಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಭೇಟಿ ಮಾಡಲು ನಾನು ಯೋಜಿಸುತ್ತಿದ್ದೇನೆ . ನನ್ನ ವಿನಂತಿಯನ್ನು ಮರುಪರಿಶೀಲಿಸುವಂತೆ ನಾನು ವಿನಂತಿಸುತ್ತೇನೆ ಎಂದು ಹೇಳಿದ್ದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT