ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜಕೀಯ

ಸಂಪುಟ ಸ್ಥಾನಮಾನ: ಗುರು ಕಾಣಿಕೆ ತಿರಸ್ಕರಿಸಿದ ಯಡಿಯೂರಪ್ಪ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಗೆ ನೀಡಿದ್ದ  ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂದಕ್ಕೆ ಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ಆಗ್ರಹ ಪಡಿಸಿದ್ದಾರೆ. 

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಗೆ ನೀಡಿದ್ದ  ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂದಕ್ಕೆ ಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ಆಗ್ರಹ ಪಡಿಸಿದ್ದಾರೆ. 

ತಮಗೆ  ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಹಾಲಿ ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಒಂದು ರೀತಿ ಗುರುಕಾಣಿಕೆಯಾಗಿ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಆದೇಶ ಮಾಡಿದ್ದರು. ಏಕೋ ಏನೋ 24 ಗಂಟೆಯೊಳಗೆ  ಸರಕಾರಿ ಆದೇಶವನ್ನು ಯಡಿಯೂರಪ್ಪ ನಯವಾಗಿಯೇ ತಿರಸ್ಕರಿಸಿದ್ದಾರೆ. 

 ಈ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ನಿಕಟ ಪೂರ್ವ ಮುಖ್ಯಮಂತ್ರಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ಸಾಕು. ಸಂಪುಟ ದರ್ಜೆಯ ಸ್ಥಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT