ವೀರಪ್ಪ ಮೊಯ್ಲಿ 
ರಾಜಕೀಯ

'ಬಿ ಬಸವಲಿಂಗಪ್ಪ ಸಿಎಂ ಆಗಬಹುದಿತ್ತು, ಆದರೆ ಮೊಯ್ಲಿ ಮಾಡಲಾಯಿತು; ಖರ್ಗೆ- ಪರಮೇಶ್ವರ್ ಗೂ ಇದೇ ಅನ್ಯಾಯವಾಯಿತು'

ಪಕ್ಷವನ್ನು ಮತ್ತಷ್ಟು ಬಲ ಪಡಿಸಲು ಹಾಗೂ ದಲಿತ ಸಮುದಾಯಗಳ ಬೆಂಬಲ ಪಡೆಯಲು ರಾಜ್ಯದಲ್ಲಿರುವ ಎಸ್ ಸಿ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಎಸ್ ಸಿ ಮೋರ್ಚ ಸದಸ್ಯರು ಪ್ರವಾಸ ನಡೆಸಲಿದ್ದಾರೆ.

ಮೈಸೂರು: ಪಕ್ಷವನ್ನು ಮತ್ತಷ್ಟು ಬಲ ಪಡಿಸಲು ಹಾಗೂ ದಲಿತ ಸಮುದಾಯಗಳ ಬೆಂಬಲ ಪಡೆಯಲು ರಾಜ್ಯದಲ್ಲಿರುವ ಎಸ್ ಸಿ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಎಸ್ ಸಿ ಮೋರ್ಚ ಸದಸ್ಯರು ಪ್ರವಾಸ ನಡೆಸಲಿದ್ದಾರೆ.

ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಮತ್ತು ಇತರೆ ಎಲ್ಲಾ ಎಸ್‌ಸಿ ಮೀಸಲು ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿರುವ ನಾಯಕರು ಗುರುವಾರ ಮೈಸೂರು ಮತ್ತು ಚಾಮರಾಜನಗರ ಪ್ರದೇಶದಿಂದ ಪ್ರವಾಸ ಆರಂಭಿಸಿದರು. 2023 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ನಾರಾಯಣಸ್ವಾಮಿ ವ್ಯಕ್ತಪಡಿಸಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ  ಸುಲಭವಾಗಿ ಗೆದ್ದು ಸ್ಥಿರ ಸರ್ಕಾರ ನೀಡುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಎಸ್‌ಸಿ ಮುಖ್ಯಮಂತ್ರಿಯ ಬೇಡಿಕೆಗೆ ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ, ಕಾಂಗ್ರೆಸ್ ದಲಿತರನ್ನು ತನ್ನ ವೋಟ್ ಬ್ಯಾಂಕ್ ಆಗಿ ಮಾತ್ರ ಬಳಸಿಕೊಂಡಿದೆ ಆದರೆ ಸಮುದಾಯದ ಯಾರನ್ನೂ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡದೆ ಮೋಸ ಮಾಡಿದೆ ಎಂದು ಹೇಳಿದರು.

ಒಂದು ಕಾಲದಲ್ಲಿ ಬಿ ಬಸವಲಿಂಗಪ್ಪ ಸಿಎಂ ಆಗಬಹುದಿತ್ತು. ಆದರೆ ವೀರಪ್ಪ ಮೊಯ್ಲಿಯನ್ನು ಸಿಎಂ ಮಾಡಲಾಯಿತು. ಮಲ್ಲಿಕಾರ್ಜುನ ಖರ್ಗೆ ಮತ್ತು ಜಿ ಪರಮೇಶ್ವರ ಅವರಿಗೂ ಇದೇ ರೀತಿಯಾಯಿತು, ನಂತರ ಅವರನ್ನು ದೂರವಿಡಲಾಯಿತು, ಎಂದು ನಾರಾಯಣಸ್ವಾಮಿ ಹೇಳಿದರು, ಆದರೆ ಬಿಜೆಪಿ ಎಲ್ಲಾ ಸಮುದಾಯಗಳೊಂದಿಗೆ ನಿಂತಿದೆ.

2023 ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ರಾಜ್ಯಾದ್ಯಂತ ಸಂಚರಿಸಿ ದಲಿತ ಸಮುದಾಯದ ಬೆಂಬಲ ಕೋರುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!