ವೀರಪ್ಪ ಮೊಯ್ಲಿ 
ರಾಜಕೀಯ

'ಬಿ ಬಸವಲಿಂಗಪ್ಪ ಸಿಎಂ ಆಗಬಹುದಿತ್ತು, ಆದರೆ ಮೊಯ್ಲಿ ಮಾಡಲಾಯಿತು; ಖರ್ಗೆ- ಪರಮೇಶ್ವರ್ ಗೂ ಇದೇ ಅನ್ಯಾಯವಾಯಿತು'

ಪಕ್ಷವನ್ನು ಮತ್ತಷ್ಟು ಬಲ ಪಡಿಸಲು ಹಾಗೂ ದಲಿತ ಸಮುದಾಯಗಳ ಬೆಂಬಲ ಪಡೆಯಲು ರಾಜ್ಯದಲ್ಲಿರುವ ಎಸ್ ಸಿ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಎಸ್ ಸಿ ಮೋರ್ಚ ಸದಸ್ಯರು ಪ್ರವಾಸ ನಡೆಸಲಿದ್ದಾರೆ.

ಮೈಸೂರು: ಪಕ್ಷವನ್ನು ಮತ್ತಷ್ಟು ಬಲ ಪಡಿಸಲು ಹಾಗೂ ದಲಿತ ಸಮುದಾಯಗಳ ಬೆಂಬಲ ಪಡೆಯಲು ರಾಜ್ಯದಲ್ಲಿರುವ ಎಸ್ ಸಿ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಎಸ್ ಸಿ ಮೋರ್ಚ ಸದಸ್ಯರು ಪ್ರವಾಸ ನಡೆಸಲಿದ್ದಾರೆ.

ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಮತ್ತು ಇತರೆ ಎಲ್ಲಾ ಎಸ್‌ಸಿ ಮೀಸಲು ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿರುವ ನಾಯಕರು ಗುರುವಾರ ಮೈಸೂರು ಮತ್ತು ಚಾಮರಾಜನಗರ ಪ್ರದೇಶದಿಂದ ಪ್ರವಾಸ ಆರಂಭಿಸಿದರು. 2023 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ನಾರಾಯಣಸ್ವಾಮಿ ವ್ಯಕ್ತಪಡಿಸಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ  ಸುಲಭವಾಗಿ ಗೆದ್ದು ಸ್ಥಿರ ಸರ್ಕಾರ ನೀಡುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಎಸ್‌ಸಿ ಮುಖ್ಯಮಂತ್ರಿಯ ಬೇಡಿಕೆಗೆ ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ, ಕಾಂಗ್ರೆಸ್ ದಲಿತರನ್ನು ತನ್ನ ವೋಟ್ ಬ್ಯಾಂಕ್ ಆಗಿ ಮಾತ್ರ ಬಳಸಿಕೊಂಡಿದೆ ಆದರೆ ಸಮುದಾಯದ ಯಾರನ್ನೂ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡದೆ ಮೋಸ ಮಾಡಿದೆ ಎಂದು ಹೇಳಿದರು.

ಒಂದು ಕಾಲದಲ್ಲಿ ಬಿ ಬಸವಲಿಂಗಪ್ಪ ಸಿಎಂ ಆಗಬಹುದಿತ್ತು. ಆದರೆ ವೀರಪ್ಪ ಮೊಯ್ಲಿಯನ್ನು ಸಿಎಂ ಮಾಡಲಾಯಿತು. ಮಲ್ಲಿಕಾರ್ಜುನ ಖರ್ಗೆ ಮತ್ತು ಜಿ ಪರಮೇಶ್ವರ ಅವರಿಗೂ ಇದೇ ರೀತಿಯಾಯಿತು, ನಂತರ ಅವರನ್ನು ದೂರವಿಡಲಾಯಿತು, ಎಂದು ನಾರಾಯಣಸ್ವಾಮಿ ಹೇಳಿದರು, ಆದರೆ ಬಿಜೆಪಿ ಎಲ್ಲಾ ಸಮುದಾಯಗಳೊಂದಿಗೆ ನಿಂತಿದೆ.

2023 ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ರಾಜ್ಯಾದ್ಯಂತ ಸಂಚರಿಸಿ ದಲಿತ ಸಮುದಾಯದ ಬೆಂಬಲ ಕೋರುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT