ವೀರಪ್ಪ ಮೊಯ್ಲಿ 
ರಾಜಕೀಯ

'ಬಿ ಬಸವಲಿಂಗಪ್ಪ ಸಿಎಂ ಆಗಬಹುದಿತ್ತು, ಆದರೆ ಮೊಯ್ಲಿ ಮಾಡಲಾಯಿತು; ಖರ್ಗೆ- ಪರಮೇಶ್ವರ್ ಗೂ ಇದೇ ಅನ್ಯಾಯವಾಯಿತು'

ಪಕ್ಷವನ್ನು ಮತ್ತಷ್ಟು ಬಲ ಪಡಿಸಲು ಹಾಗೂ ದಲಿತ ಸಮುದಾಯಗಳ ಬೆಂಬಲ ಪಡೆಯಲು ರಾಜ್ಯದಲ್ಲಿರುವ ಎಸ್ ಸಿ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಎಸ್ ಸಿ ಮೋರ್ಚ ಸದಸ್ಯರು ಪ್ರವಾಸ ನಡೆಸಲಿದ್ದಾರೆ.

ಮೈಸೂರು: ಪಕ್ಷವನ್ನು ಮತ್ತಷ್ಟು ಬಲ ಪಡಿಸಲು ಹಾಗೂ ದಲಿತ ಸಮುದಾಯಗಳ ಬೆಂಬಲ ಪಡೆಯಲು ರಾಜ್ಯದಲ್ಲಿರುವ ಎಸ್ ಸಿ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಎಸ್ ಸಿ ಮೋರ್ಚ ಸದಸ್ಯರು ಪ್ರವಾಸ ನಡೆಸಲಿದ್ದಾರೆ.

ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಮತ್ತು ಇತರೆ ಎಲ್ಲಾ ಎಸ್‌ಸಿ ಮೀಸಲು ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿರುವ ನಾಯಕರು ಗುರುವಾರ ಮೈಸೂರು ಮತ್ತು ಚಾಮರಾಜನಗರ ಪ್ರದೇಶದಿಂದ ಪ್ರವಾಸ ಆರಂಭಿಸಿದರು. 2023 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ನಾರಾಯಣಸ್ವಾಮಿ ವ್ಯಕ್ತಪಡಿಸಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ  ಸುಲಭವಾಗಿ ಗೆದ್ದು ಸ್ಥಿರ ಸರ್ಕಾರ ನೀಡುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಎಸ್‌ಸಿ ಮುಖ್ಯಮಂತ್ರಿಯ ಬೇಡಿಕೆಗೆ ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ, ಕಾಂಗ್ರೆಸ್ ದಲಿತರನ್ನು ತನ್ನ ವೋಟ್ ಬ್ಯಾಂಕ್ ಆಗಿ ಮಾತ್ರ ಬಳಸಿಕೊಂಡಿದೆ ಆದರೆ ಸಮುದಾಯದ ಯಾರನ್ನೂ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡದೆ ಮೋಸ ಮಾಡಿದೆ ಎಂದು ಹೇಳಿದರು.

ಒಂದು ಕಾಲದಲ್ಲಿ ಬಿ ಬಸವಲಿಂಗಪ್ಪ ಸಿಎಂ ಆಗಬಹುದಿತ್ತು. ಆದರೆ ವೀರಪ್ಪ ಮೊಯ್ಲಿಯನ್ನು ಸಿಎಂ ಮಾಡಲಾಯಿತು. ಮಲ್ಲಿಕಾರ್ಜುನ ಖರ್ಗೆ ಮತ್ತು ಜಿ ಪರಮೇಶ್ವರ ಅವರಿಗೂ ಇದೇ ರೀತಿಯಾಯಿತು, ನಂತರ ಅವರನ್ನು ದೂರವಿಡಲಾಯಿತು, ಎಂದು ನಾರಾಯಣಸ್ವಾಮಿ ಹೇಳಿದರು, ಆದರೆ ಬಿಜೆಪಿ ಎಲ್ಲಾ ಸಮುದಾಯಗಳೊಂದಿಗೆ ನಿಂತಿದೆ.

2023 ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ರಾಜ್ಯಾದ್ಯಂತ ಸಂಚರಿಸಿ ದಲಿತ ಸಮುದಾಯದ ಬೆಂಬಲ ಕೋರುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT