ಸಾಂದರ್ಭಿಕ ಚಿತ್ರ 
ರಾಜಕೀಯ

ಪಕ್ಷದ ಕಾರ್ಯಕರ್ತರ ಕುಂದುಕೊರತೆ ಆಲಿಸಲು ಜಿಲ್ಲಾ ಸಚಿವರಿಗೆ ಸೂಚನೆ

ಪಕ್ಷವನ್ನು ಬಲಪಡಿಸುವುದರ ಜೊತೆಗೆ ಚುನಾವಣಾ ಸಮಯವಾದ್ದರಿಂದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಲು ನೆರವಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ನಾಯಕರು ಮತ್ತು ತಳಮಟ್ಟದ ಕಾರ್ಯಕರ್ತರ ನಡುವೆ ಉತ್ತಮ ಸಮನ್ವಯವನ್ನು ಸಾಧಿಸುವ ಉದ್ದೇಶದಿಂದ, ಕುಂದುಕೊರತೆಗಳನ್ನು ಪರಿಹರಿಸಲು ಆಯಾ ಜಿಲ್ಲೆಯ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸುವ ಕೆಲಸವನ್ನು ಜಿಲ್ಲಾ ಮಂತ್ರಿಗಳಿಗೆ ನೀಡಲಾಗಿದೆ.

ಇದರಿಂದ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಚುನಾವಣಾ ಸಮಯವಾದ್ದರಿಂದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಲು ನೆರವಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಅಲ್ಲದೆ, ಪಕ್ಷದ ಕೇಂದ್ರ ನಾಯಕತ್ವವು ಮಂತ್ರಿಗಳಿಗೆ ವಾರದಲ್ಲಿ ಒಂದು ಬಾರಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ಸೂಚಿಸಿದೆ. ಬೆಂಗಳೂರಿನ ಪಕ್ಷದ ರಾಜ್ಯ ಮುಖ್ಯ ಕಚೇರಿಗೆ ಭೇಟಿ ನೀಡುವಂತೆ ಕೂಡ ಕೇಂದ್ರ ನಾಯಕರು ತಿಳಿಸಿದ್ದಾರೆ. ಪ್ರತಿ ದಿನ ಇಬ್ಬರು ಸಚಿವರು ಕಚೇರಿಗೆ ಭೇಟಿ ನೀಡಲಿದ್ದಾರೆ. ನಾನು ಪ್ರತಿ ಸೋಮವಾರ ಕಚೇರಿಗೆ ಭೇಟಿ ನೀಡುತ್ತಿದ್ದೇನೆ ಎಂದು ಸೋಮವಾರ ಪಕ್ಷದ ಕಚೇರಿಗೆ ಭೇಟಿ ನೀಡಿದ ಅಬಕಾರಿ ಸಚಿವ ಕೆ ಗೋಪಾಲಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT