ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯೋ ಕಾರ್ಯಕ್ರಮ: 50 ಸಾವಿರ ಕೋಟಿ ರೂ. ಖರ್ಚು ಮಾಡಿದರೂ ಮುಗಿಯಲ್ಲ!

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ಹೆಸರಲ್ಲಿ ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯುವ ಕಾರ್ಯಕ್ರಮ ಎಂದು ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ವಿರುದ್ದ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕೋಲಾರ: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ಹೆಸರಲ್ಲಿ ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯುವ ಕಾರ್ಯಕ್ರಮ ಎಂದು ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ವಿರುದ್ದ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಎಚ್‌ಡಿ ಕುಮಾರಸ್ವಾಮಿ, ಇತ್ತೀಚೆಗೆ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಅವರು ರಮೇಶ್ ಕುಮಾರ್‌ರನ್ನು ಹೊಗಳಿದ ವಿಚಾರವಾಗಿ ವಾಗ್ದಾಳಿ ನಡೆಸಿದ್ದಾರೆ. ರಮೇಶ್ ಕುಮಾರ್ ಎತ್ತಿನ ಹೊಳೆ ಯೋಜನೆಯ ಮಹಾನ್ ನಾಯಕ, 3 ವರ್ಷದಲ್ಲಿ ಎತ್ತಿನ ಹೊಳೆ ನೀರು ತರುವುದಾಗಿ ಹೇಳಿದ್ದರು, ಆದರೆ 10 ವರ್ಷವಾದರೂ ಬಂದಿಲ್ಲ ಎಂದು  ಕಿಡಿಕಾರಿದ್ದಾರೆ.

ಎತ್ತಿನಹೊಳೆ ನೀರು ಸಂಗ್ರಹ ಮಾಡಲು ಮೊದಲು ಐದು ಟಿ ಎಂ ಸಿ ಸಾಮರ್ಥ್ಯದ ಜಲಾಶಯ ನಿರ್ಮಿಸುವುದಾಗಿ ಹೇಳಿ ಈಗ ಎರಡು ಟಿಎಂಸಿ ಸಾಮರ್ಥ್ಯಕ್ಕೆ ಬಂದಿದ್ದಾರೆ. 50 ಸಾವಿರ ಕೋಟಿ ಹಣ ಖರ್ಚು ಮಾಡಿದರೂ ಎತ್ತಿನಹೊಳೆ ಯೋಜನೆ ಮುಗಿಯಲ್ಲ ಎಂದು ಎಚ್‌ಡಿಕೆ ಭವಿಷ್ಯ ನುಡಿದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವರ್ಷಾಂತ್ಯದ ವೇಳೆಗೆ ಭಾರತ ರಷ್ಯಾದ ತೈಲ ಆಮದನ್ನು 'ಹಂತ ಹಂತವಾಗಿ ನಿಲ್ಲಿಸಲಿದೆ ': ಪುನರುಚ್ಛರಿಸಿದ ಟ್ರಂಪ್

ತಂದೆ ರಾಜಕೀಯ ಜೀವನ ಮುಗಿಯಿತು; ಯತೀಂದ್ರ ಹೇಳಿಕೆಯಿಂದ ಸಂಚಲನ, ರಾಜಕೀಯ ಜೀವನದ ಕೊನೆಗಾಲದಲ್ಲೂ ಡಿಕೆಶಿಗೆ ಚೆಕ್‌ಮೇಟ್ ನೀಡಲು ಸಿದ್ದು ಟೀಮ್ ಮುಂದು..!

ಬ್ಯುಸಿನೆಸ್ ಕಾರಿಡಾರ್'ಗಾಗಿ ಭೂಮಿ ಕಳೆದುಕೊಂಡವರಿಗೆ 3 ಪಟ್ಟು ಪರಿಹಾರ: ರಾಜ್ಯ ಸರ್ಕಾರ

'ಮಹಾತ್ಮ ಗಾಂಧಿ ಕೂತ ಸ್ಥಾನದಲ್ಲಿ ಇಂದು ಖರ್ಗೆ ಕೂತಿದ್ದಾರೆ: ಅಡ್ವಾಣಿ ಸಾಧ್ಯವಿಲ್ಲ ಎಂದಿದ್ದನ್ನು ಖರ್ಗೆ ಮಾಡಿ ತೋರಿಸಿದ್ದಾರೆ'

ವಂಚನೆ ಪ್ರಕರಣದಲ್ಲಿ ದೋಷಿಯಾಗಿದ್ದ RJD ಮಾಜಿ ಶಾಸಕ ಅನಿಲ್ ಸಹಾನಿ BJP ಸೇರ್ಪಡೆ

SCROLL FOR NEXT