ಪ್ರತಾಪ್ ಸಿಂಹ 
ರಾಜಕೀಯ

'ಬೇರೆಯವರು ಹೆತ್ತು-ಹೊತ್ತು ಬೆಳೆಸಿದ ಮಗು ಶಾಲೆಗೆ ಹೋಗುವಾಗ ಅದು ನನ್ನದು ಎಂದರೇ ಹೇಗೆ?'

ಮೈಸೂರು– ಬೆಂಗಳೂರು ದಶಪಥ ಯೋಜನೆ ನಿಮ್ಮದಲ್ಲ. ಯಾವಾಗಲೋ ಜಾರಿಯಾದ ಯೋಜನೆಯನ್ನು ನನ್ನದು ಎಂದರೆ ಹೇಗೆ? ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ತಮ್ಮದೇ ಪಕ್ಷದ ಸಂಸದ ಪ್ರತಾಪ ಸಿಂಹ ಅವರಿಗೆ ಚಾಟಿ ಬೀಸಿದ್ದಾರೆ.

ಮೈಸೂರು: ಮೈಸೂರು– ಬೆಂಗಳೂರು ದಶಪಥ ಯೋಜನೆ ನಿಮ್ಮದಲ್ಲ. ಯಾವಾಗಲೋ ಜಾರಿಯಾದ ಯೋಜನೆಯನ್ನು ನನ್ನದು ಎಂದರೆ ಹೇಗೆ? ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ತಮ್ಮದೇ ಪಕ್ಷದ ಸಂಸದ ಪ್ರತಾಪ ಸಿಂಹ ಅವರಿಗೆ ಚಾಟಿ ಬೀಸಿದ್ದಾರೆ.

ಮೈಸೂರಿನಲ್ಲಿ ಮಾತಮಾಡಿದ ಅವರು ನಾನು ಸಂಸದನಾಗಿದ್ದ ಅವಧಿಯಲ್ಲಿ ಈ ಯೋಜನೆಗೆ ಡಿಪಿಆರ್‌ ತಯಾರಾಗಿತ್ತು. ಆ ವೇಳೆ ನಾನು ಹಾಗೂ ಸಂಸದರಾಗಿದ್ದ ಆರ್‌.ಧ್ರುವನಾರಾಯಣ, ರಮ್ಯಾ ಮತ್ತು ಡಿ.ಕೆ.ಸುರೇಶ್‌ ಇದಕ್ಕೆ ಸಂಬಂಧಿಸಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದೆವು. ಅಂದು ತಯಾರಾಗಿದ್ದ ಯೋಜನೆ ಇಂದು ಕಾರ್ಯರೂಪಕ್ಕೆ ಬಂದಿದೆ. ನೀನು ಈಗ ಬಂದು ಎಲ್ಲವನ್ನೂ ನಾನೇ ಮಾಡಿದ್ದು ಅಂದರೆ ಹೇಗೆ’ ಎಂದು ಪ್ರಶ್ನಿಸಿದರು.

ಹಿಂದಿನ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಶ್ರಮವೂ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಪಾತ್ರವೂ ಇದೆ. 2013ರಲ್ಲೇ ಈ ಯೋಜನೆ ಚಾಲ್ತಿಗೆ ಬಂದಿತ್ತು. ಬೇರೆಯವರು ಹೆತ್ತು, ಹೊತ್ತು ಬೆಳೆಸಿದ ಮಗುವೊಂದು ಶಾಲೆಗೆ ಹೋಗುವಾಗ, ಆ ಮಗು ನನ್ನದು ಎಂದರೆ ಹೇಗೆ? ಎಂದು ಲೇವಡಿ ಮಾಡಿದರು.

ದಶಪಥ ರಸ್ತೆ ವಿಚಾರದಲ್ಲಿ ಮಂಡ್ಯದ ಸಂಸದೆ ಸುಮಲತಾ ಹೇಳಿದ್ದು ಸರಿಯಾಗಿಯೇ ಇದೆ. 10–12 ವರ್ಷಗಳಷ್ಟು ಹಿಂದಿನ ಯೋಜನೆ ಇದಾಗಿದ್ದು, ನಾನೇ ಮಾಡಿದ್ದೇನೆ ಎಂದು ಎಷ್ಟು ದಿನ ಸುಳ್ಳು ಹೇಳುತ್ತೀರಾ? ನೀವು ಏನಾದರೂ ಹೊಸ ಯೋಜನೆ ತಂದಿದ್ದರೆ ಜನರಿಗೆ ತಿಳಿಸಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ, ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

ಟ್ರಂಪ್ ಹತ್ಯೆಗೆ ಸಂಚು: ಇರಾನ್ ಜೊತೆಗೆ ನಂಟು ಹೊಂದಿದ ಪಾಕ್ ವ್ಯಕ್ತಿ ದೋಷಿ ಎಂದ ಅಮೆರಿಕ ನ್ಯಾಯಾಲಯ!

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

T20 ವಿಶ್ವಕಪ್ 2026: 4 ಓವರ್ ನಲ್ಲಿ 53 ರನ್.. ಸೈಲೆಂಟ್ ಮಾಡಲು ಬಂದು ತಮ್ಮ ತಂಡವೇ ಸೈಲೆಂಟ್ ಆಗುವಂತೆ ಮಾಡಿದ Sam Curran

ಡಾಗ್ ಸತೀಶ್ ಗೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು FIR, 2 ಪ್ರಕರಣ

SCROLL FOR NEXT