ಪ್ರತಾಪ್ ಸಿಂಹ 
ರಾಜಕೀಯ

'ಬೇರೆಯವರು ಹೆತ್ತು-ಹೊತ್ತು ಬೆಳೆಸಿದ ಮಗು ಶಾಲೆಗೆ ಹೋಗುವಾಗ ಅದು ನನ್ನದು ಎಂದರೇ ಹೇಗೆ?'

ಮೈಸೂರು– ಬೆಂಗಳೂರು ದಶಪಥ ಯೋಜನೆ ನಿಮ್ಮದಲ್ಲ. ಯಾವಾಗಲೋ ಜಾರಿಯಾದ ಯೋಜನೆಯನ್ನು ನನ್ನದು ಎಂದರೆ ಹೇಗೆ? ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ತಮ್ಮದೇ ಪಕ್ಷದ ಸಂಸದ ಪ್ರತಾಪ ಸಿಂಹ ಅವರಿಗೆ ಚಾಟಿ ಬೀಸಿದ್ದಾರೆ.

ಮೈಸೂರು: ಮೈಸೂರು– ಬೆಂಗಳೂರು ದಶಪಥ ಯೋಜನೆ ನಿಮ್ಮದಲ್ಲ. ಯಾವಾಗಲೋ ಜಾರಿಯಾದ ಯೋಜನೆಯನ್ನು ನನ್ನದು ಎಂದರೆ ಹೇಗೆ? ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ತಮ್ಮದೇ ಪಕ್ಷದ ಸಂಸದ ಪ್ರತಾಪ ಸಿಂಹ ಅವರಿಗೆ ಚಾಟಿ ಬೀಸಿದ್ದಾರೆ.

ಮೈಸೂರಿನಲ್ಲಿ ಮಾತಮಾಡಿದ ಅವರು ನಾನು ಸಂಸದನಾಗಿದ್ದ ಅವಧಿಯಲ್ಲಿ ಈ ಯೋಜನೆಗೆ ಡಿಪಿಆರ್‌ ತಯಾರಾಗಿತ್ತು. ಆ ವೇಳೆ ನಾನು ಹಾಗೂ ಸಂಸದರಾಗಿದ್ದ ಆರ್‌.ಧ್ರುವನಾರಾಯಣ, ರಮ್ಯಾ ಮತ್ತು ಡಿ.ಕೆ.ಸುರೇಶ್‌ ಇದಕ್ಕೆ ಸಂಬಂಧಿಸಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದೆವು. ಅಂದು ತಯಾರಾಗಿದ್ದ ಯೋಜನೆ ಇಂದು ಕಾರ್ಯರೂಪಕ್ಕೆ ಬಂದಿದೆ. ನೀನು ಈಗ ಬಂದು ಎಲ್ಲವನ್ನೂ ನಾನೇ ಮಾಡಿದ್ದು ಅಂದರೆ ಹೇಗೆ’ ಎಂದು ಪ್ರಶ್ನಿಸಿದರು.

ಹಿಂದಿನ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಶ್ರಮವೂ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಪಾತ್ರವೂ ಇದೆ. 2013ರಲ್ಲೇ ಈ ಯೋಜನೆ ಚಾಲ್ತಿಗೆ ಬಂದಿತ್ತು. ಬೇರೆಯವರು ಹೆತ್ತು, ಹೊತ್ತು ಬೆಳೆಸಿದ ಮಗುವೊಂದು ಶಾಲೆಗೆ ಹೋಗುವಾಗ, ಆ ಮಗು ನನ್ನದು ಎಂದರೆ ಹೇಗೆ? ಎಂದು ಲೇವಡಿ ಮಾಡಿದರು.

ದಶಪಥ ರಸ್ತೆ ವಿಚಾರದಲ್ಲಿ ಮಂಡ್ಯದ ಸಂಸದೆ ಸುಮಲತಾ ಹೇಳಿದ್ದು ಸರಿಯಾಗಿಯೇ ಇದೆ. 10–12 ವರ್ಷಗಳಷ್ಟು ಹಿಂದಿನ ಯೋಜನೆ ಇದಾಗಿದ್ದು, ನಾನೇ ಮಾಡಿದ್ದೇನೆ ಎಂದು ಎಷ್ಟು ದಿನ ಸುಳ್ಳು ಹೇಳುತ್ತೀರಾ? ನೀವು ಏನಾದರೂ ಹೊಸ ಯೋಜನೆ ತಂದಿದ್ದರೆ ಜನರಿಗೆ ತಿಳಿಸಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT