ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

2023ರ ವಿಧಾನಸಭೆ ಚುನಾವಣೆಯೇ ನನ್ನ ಜೀವನದ ಕೊನೆಯ ಹೋರಾಟ: ಎಚ್.ಡಿ ಕುಮಾರಸ್ವಾಮಿ

2023ರ ಚುನಾವಣೆಯೇ ನನ್ನ ಜೀವನದ ಕೊನೆಯ ಹೋರಾಟ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಹಾವೇರಿ: 2023ರ ಚುನಾವಣೆಯೇ ನನ್ನ ಜೀವನದ ಕೊನೆಯ ಹೋರಾಟ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಎರಡು ವರ್ಷಗಳ ಕಾಲ ನಾಡಿನ ಪ್ರತಿ ಕುಟುಂಬದ ಸಮಸ್ಯೆ ಕೇಳಲು ಪ್ರಯತ್ನಿಸುವುದಾಗಿ ಹೇಳಿದರು. 

ರಾಜ್ಯದಲ್ಲಿ ಬಿಜೆಪಿಯಂತಹ ಕೆಟ್ಟ ಸರ್ಕಾರ ಬರಲು ಕಾಂಗ್ರೆಸ್ ನಾಯಕರೇ ಕಾರಣ ಎಂದು ಆರೋಪಿಸಿದ ಕುಮಾರ ಸ್ವಾಮಿ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ವಿರುದ್ಧವೂ ವಾಗ್ದಾಳಿ ನಡೆಸಿದರು.

ನಾನು ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಯಾವ ನೀರಾವರಿ ಅಥವಾ ರಸ್ತೆ ಯೋಜನೆಗೆ ಅನುಮೋದನೆ ನೀಡಲಿಲ್ಲ. ಬದಲಿಗೆ ರೈತರ 25 ಸಾವಿರ ಕೋಟಿ ಸಾಲಮನ್ನಾ ಮಾಡಿದೆ. ಇದರಿಂದ ನನಗೇನು ಲಾಭವಿಲ್ಲ. ಅದೇ ನೀರಾವರಿ, ರಸ್ತೆ ನಿರ್ಮಾಣ ಯೋಜನೆಗೆ ಮುಂದಾಗಿದ್ದರೆ ಪ್ರತಿಶತ 10ರಷ್ಟು ಕಮೀಷನ್ ಬರುತ್ತಿತ್ತು ಎಂದು ಕುಮಾರಸ್ವಾಮಿ ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT