ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಬದಲಾವಣೆ ಬೇಡ: ಸರ್ಕಾರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು ಗ್ರಾಮೀಣ ಪ್ರದೇಶ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಬದಲಾವಣೆಗಳನ್ನೂ ಮಾಡದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಬೆಂಗಳೂರು: ಬೆಂಗಳೂರು ಗ್ರಾಮೀಣ ಪ್ರದೇಶ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯಲ್ಲಿ ಯಾವುದೇ ಬದಲಾವಣೆಗಳನ್ನೂ ಮಾಡದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, ಎತ್ತಿನಹೊಳೆ ಯೋಜನೆಯ ಭೈರಗೊಂಡ್ಲು ಜಲಾಶಯದ ಸಂಗ್ರಹಣಾ ಸಾಮರ್ಥ್ಯವನ್ನು 5.78 ಟಿಎಂಸಿ ಯಿಂದ 2 ಟಿಎಂಸಿವರೆಗೆ ಕಡಿತಗೊಳಿಸುವ ಪರ್ಯಾಯ ಪ್ರಸ್ತಾವನೆ ಕೂಡಲೇ ಕೈಬಿಡಿ ಎಂದು ಒತ್ತಾಯಿಸಿದ್ದಾರೆ. 

ರಾಜ್ಯ ಸರ್ಕಾರದ ಪರಿಷ್ಕೃತ ಪ್ರಸ್ತಾವನೆಯಿಂದಾಗಿ ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಯ ಮೇಲೆ ಉಂಟಾಗುವ ಭೀಕರ ಪರಿಣಾಮ ಬೀರಲಿದೆ. ಹೀಗಾಗಿ ರಾಜ್ಯ ಸರ್ಕಾರದ ಪರಿಸರದ ಪ್ರಸ್ತಾವನೆಯನ್ನು ಕೂಡಲೇ ಕೈಬಿಡಬೇಕು ಇಲ್ಲದಿದ್ದರೆ ಬೆಂಗಳೂರು ಗ್ರಾಮಾಂತರ ಕೋಲಾರ ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. 

ಎತ್ತಿನಹೊಳೆಯ ಕಾಮಗಾರಿ 2012ರಿಂದ ಜಾರಿಯಲ್ಲಿದೆ ಇದುವರೆಗೂ 8200ಕ್ಕೂ ಹೆಚ್ಚು ಕೋಟಿ ರೂಪಾಯಿ ಖರ್ಚಾಗಿದೆ. ಯೋಜನೆಯ ಪ್ರಮುಖ ಭಾಗವಾದ ಬೈರಗೊಂಡ್ಲು ನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಇಂತಹ ಸಂದರ್ಭದಲ್ಲಿ ಪರಿಷ್ಕೃತ ಪ್ರಸ್ತಾವನೆ ಬೆಂಗಳೂರು ಗ್ರಾಮಾಂತರ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ತೊಂದರೆಯಾಗಲಿದೆ. 

ಎತ್ತಿನಹೊಳೆ ಯೋಜನೆಯನ್ನು ಆರಂಭಗೊಂಡಿರುವುದು ಬೆಂಗಳೂರು ಗ್ರಾಮಾಂತರ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು. ಆದರೆ, ರಾಜ್ಯ ಸರ್ಕಾರ ಈ ಯೋಜನೆಯ ಪರಿಷ್ಕೃತ ಪ್ರಸ್ತಾವನೆಗೆ ಮುಂದಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ಯಾಯವಾಗಲಿದೆ. ರಾಜ್ಯ ಸರ್ಕಾರ ಪರಿಷ್ಕೃತ ಯೋಜನೆಯನ್ನು ಕೂಡಲೇ ಕೈಬಿಟ್ಟು, ಅಗತ್ಯವಿರುವ ಸೇರಿದಂತೆ ಇನ್ನಿತರ ಕೆಲಸಗಳನ್ನು ಆರಂಭಿಸುವಂತೆ ಅವರು ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್