ರಾಜಕೀಯ

ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಈಶ್ವರಪ್ಪ ವಿರುದ್ಧ ದೂರು ದಾಖಲು

Shilpa D

ಶಿವಮೊಗ್ಗ: ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್ ಪಿ ಗಿರೀಶ್ ಮತ್ತು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಎಂಬುವರು ಈಶ್ವರಪ್ಪ ವಿರುದ್ಧ ದೂರು ದಾಖಲಿಸಿದ್ದಾರೆ.

ಆಗಸ್ಟ್ 8 ರಂದು ಮಠ ಮಾಂಗಲ್ಯ ಮಂದಿರದಲ್ಲಿ ನಡೆದ ನಗರ ಬಿಜೆಪಿ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಚಿವರ ಪ್ರಚೋದನಕಾರಿ ಹೇಳಿಕೆಗಳನ್ನು ಗಿರೀಶ್ ತಮ್ಮ ದೂರಿನಲ್ಲಿ (ನಂ. 397/2021) ಉಲ್ಲೇಖಿಸಿದ್ದಾರೆ ಮತ್ತು ಈ ಹೇಳಿಕೆ ಕೋಮು ಘರ್ಷಣೆಗೆ ಕಾರಣವಾಗಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ  ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರವೀಣ್ ಕುಮಾರ್ ಆರೋಪಿಸಿದ್ದಾರೆ. ಕೋಟೆ ಪೊಲೀಸರು ಆಗಸ್ಟ್ 11 ರಂದು ದೂರು (ಸಂಖ್ಯೆ 398/2021) ದಾಖಲಿಸಿದ್ದಾರೆ

SCROLL FOR NEXT