ಸಂಗ್ರಹ ಚಿತ್ರ 
ರಾಜಕೀಯ

ದಾವಣಗೆರೆ: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ಸೆಪ್ಟೆಂಬರ್ ತಿಂಗಳ ಎರಡನೇ ವಾರದಲ್ಲಿ ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ. 

ದಾವಣಗೆರೆ: ಸೆಪ್ಟೆಂಬರ್ ತಿಂಗಳ ಎರಡನೇ ವಾರದಲ್ಲಿ ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ. 

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸೇರಿದಂತೆ ಸರಣಿ ಚುನಾವಣೆಗಳು ಎದುರಾಗುವ ಹಿನ್ನೆಲೆಯಲ್ಲಿ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಕಾರ್ಯಕಾರಿಣಿ ಸಭೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. 

ಬಸವರಾಜ ಬೊಮ್ಮಾಯಿಯವರು ರಾಜ್ಯ ಮುಖ್ಯಮಂತ್ರಿಗಳಾದ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಕಾರಿಣಿ ಸಭೆ ಇದಾಗಿದ್ದು, ಸಭೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಬಿ.ಎಲ್.ಸಂತೋಷ್ ಅವರು ಪಾಲ್ಗೊಳ್ಳಲಿದ್ದಾರೆನ್ನಲಾಗುತ್ತಿದೆ. 

ನಿನ್ನೆಯಷ್ಟೇ ಅಪೂರ್ವ ರೆಸಾರ್ಟ್‌ಗೆ ಭೇಟಿ ನೀಡಿದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಪರಿಶೀಲನೆ ನಡೆಸಿದರು. 

ಗಣೇಶ ಚತುರ್ಥಿ ಹಬ್ಬದ ಬಳಿಕ ಸಭೆಯನ್ನು ನಡೆಸಲಾಗುತ್ತದೆ. ನಾವು ಜಿಲ್ಲಾ ಮಟ್ಟದ ಗ್ರಾಮ ಪಂಚಾಯಿತಿ ಸಮಾವೇಶಗಳನ್ನು ಅಕ್ಟೋಬರ್‌ನಲ್ಲಿ ನಡೆಸುತ್ತೇವೆ. ಪಂಚಾಯತ್ ಸದಸ್ಯರೊಂದಿಗೆ ನಮ್ಮ ನಾಯಕರು ಮಾತುಕತೆ ನಡೆಸಲಿದ್ದಾರೆಂದು ತಿಳಿಸಿದ್ದಾರೆ. 

2022ರ ಜನವರಿ ತಿಂಗಳಿನಲ್ಲಿ 25 ಎಂಎಲ್'ಸಿ ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಸಭೆಯಲ್ಲಿ ಸೆ.3ರಂದು ಹುಬ್ಬಳ್ಳಿ-ಧಾರವಾಡ, ಕಲಬುರಗಿ ಮತ್ತು ಬೆಳಗಾವಿಯ ಮೂರು ನಗರಗಳಲ್ಲಿ ನಡೆಯುವ ಚುನಾವಣೆ ಕುರಿತು ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ. 

ಬಿಜೆಪಿ ರಾಜ್ಯ ಕಾರ್ಯದರ್ಶಿ ಮತ್ತು ಹಿರಿಯ ಎಂಎಲ್‌ಸಿ ಎನ್ ರವಿಕುಮಾರ್ ಅವರು ಮಾತನಾಡಿ, ಪಕ್ಷವನ್ನು ಬುಡಮಟ್ಟದಿಂದ ಬಲಪಡಿಸಲು ಬಿಜೆಪಿ ನಾಯಕತ್ವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT