ಕೆಂಗೇರಿ ಮೆಟ್ರೋ ಮಾರ್ಗ ಉದ್ಘಾಟನೆ ಸಮಾರಂಭದ ಚಿತ್ರ 
ರಾಜಕೀಯ

ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಕನ್ನಡಿಗನೂ ಅನಾಥ, ಕನ್ನಡವೂ ಅನಾಥ: ಕಾಂಗ್ರೆಸ್

ನೂತನ ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಕನ್ನಡ ನಿರ್ಲಕ್ಷ್ಯ ಧೋರಣೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.

ಬೆಂಗಳೂರು: ನೂತನ ಕೆಂಗೇರಿವರೆಗಿನ  ಮೆಟ್ರೋ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಕನ್ನಡ ನಿರ್ಲಕ್ಷ್ಯ ಧೋರಣೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.

ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ ಹಂತ -2 ರ ಅಡಿಯಲ್ಲಿ 7.5 ಕಿ.ಮೀ ಉದ್ದದ ನಮ್ಮ ಮೆಟ್ರೋ ಪಶ್ಚಿಮ ವಿಸ್ತರಣಾ ಮಾರ್ಗವನ್ನು (ನೇರಳೆ ಮಾರ್ಗ) ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರ ದಂಡೇ ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
 
ಆದರೆ, ಈ ಸಮಾರಂಭದಲ್ಲಿ ಕನ್ನಡದ ಒಂದೇ ಒಂದು ಅಕ್ಷರಕ್ಕೂ ಜಾಗ ನೀಡದಿರುವ ಮೂಲಕ ನಾಡವಿರೋಧಿ ಬಿಜೆಪಿ ಸರ್ಕಾರ ಕನ್ನಡಕ್ಕೆ ದ್ರೋಹ ಬಗೆಯುವ ಕೆಲಸ ಮುಂದುವರೆಸಿದೆ ಎಂದು ಕೆಪಿಸಿಸಿ ಟ್ವೀಟರ್ ಖಾತೆಯಲ್ಲಿ ಆರೋಪಿಸಲಾಗಿದೆ. 

ರಾಜ್ಯ ಬಿಜೆಪಿ ಸರ್ಕಾರ ಕನ್ನಡವನ್ನು ಕೊಲ್ಲುವ ನಾಗಪುರದ ಆದೇಶವನ್ನ ಪಾಲಿಸುತ್ತಿದೆ ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಕನ್ನಡಿಗನೂ ಅನಾಥ, ಕನ್ನಡವೂ ಅನಾಥವಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೋದಿ ಜೊತೆ ಮಾತನಾಡಿದ್ದೇನೆ, ಭಾರತ ರಷ್ಯಾದಿಂದ ತೈಲ ಖರೀದಿಯನ್ನು ಕಡಿಮೆ ಮಾಡಿದೆ: Donald Trump

ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿ ಆಚರಣೆ: ಪ್ರಧಾನಿ ಮೋದಿ ‘ಮಹಾನ್ ವ್ಯಕ್ತಿ, ಉತ್ತಮ ಸ್ನೇಹಿತ’ ಎಂದು ಕೊಂಡಾಡಿದ ಡೊನಾಲ್ಡ್ ಟ್ರಂಪ್

ಮಹಿಳೆಯರಿಗೆ ಆನ್‌ಲೈನ್ 'ಜಿಹಾದಿ ಕೋರ್ಸ್' ಆರಂಭಿಸಿದ ಜೈಶ್ ಉಗ್ರ ಸಂಘಟನೆ, ಶುಲ್ಕ ಕೇವಲ 500 ರೂ!

Karnataka Weather-ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ವರ್ಷಧಾರೆ, ಅ.29ರವರೆಗೆ ಮಳೆ ಸೂಚನೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹಾಸನಾಂಬೆ ದರ್ಶನ ಇಂದು ಕೊನೆ: 8 ಕಿ.ಮೀ ವರೆಗೆ ಧರ್ಮ ದರ್ಶನ ಸಾಲು

SCROLL FOR NEXT