ರಾಜಕೀಯ

ಕೊರೋನಾ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ- ಡಿಕೆ ಶಿವಕುಮಾರ್

Nagaraja AB

ಹುಬ್ಬಳ್ಳಿ: ಕೊರೋನಾ ನಿಗ್ರಹ ವಿಚಾರದಲ್ಲಿ ರಾಜ್ಯ ಮಟ್ಟದಲ್ಲಿ ಭಾರಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಅದರ ಪರಿಣಾಮವಾಗಿ ನಾಯಕತ್ವ ಬದಲಾವಣೆಯಾಗಿದೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಮಟ್ಟದಲ್ಲಿ ಭಾರಿ ಭ್ರಷ್ಟಾಚಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿ ನೂತನ ಮುಖ್ಯಮಂತ್ರಿಯನ್ನು ನೇಮಕ ಮಾಡಿ ತನ್ನ ಕೆಲಸ ಮುಗಿಯಿತೆಂದು ಕೈತೊಳೆದಿದೆ ಎಂದು ಲೇವಡಿ ಮಾಡಿದರು.

ಹೈಕಮಾಂಡ್ ಏಕಾಏಕಿ ನಾಯಕತ್ವ ಬದಲಾವಣೆ ಮಾಡಿದ್ದರಿಂದ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಡುವ ಸಂದರ್ಭದಲ್ಲಿ ಕಣ್ಣೀರು ಹಾಕಿದರು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

SCROLL FOR NEXT