ಪ್ರಹ್ಲಾದ್ ಜೋಶಿ 
ರಾಜಕೀಯ

ಮಗಳ ಮದುವೆಗಾಗಿ ಏಕಾಏಕಿ ರಸ್ತೆ ಸಿದ್ಧಪಡಿಸುವ ಶಕ್ತಿ ಇದೆ ಎಂದಾದರೆ, ಉಳಿದ ಕಾಮಗಾರಿ ಮುಗಿಸಲು ಇಚ್ಛಾಶಕ್ತಿ ಏಕಿಲ್ಲ?

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಮಗಳ ಮದುವೆಗಾಗಿ ತುರಾತುರಿಯಲ್ಲಿ ರಸ್ತೆ ಸಿದ್ಧಪಡಿಸಿದ ಪ್ರಹ್ಲಾದ ಜೋಶಿ ಅವರೇ, ಇದೇ ಶ್ರದ್ಧೆ, ಇಚ್ಛಾಶಕ್ತಿ ಉಳಿದ ಕಾಮಗಾರಿಯಲ್ಲಿ ಏಕೆ ತೋರಲಿಲ್ಲ?

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಮಗಳ ಮದುವೆಗಾಗಿ ತುರಾತುರಿಯಲ್ಲಿ ರಸ್ತೆ ಸಿದ್ಧಪಡಿಸಿದ ಪ್ರಹ್ಲಾದ ಜೋಶಿ ಅವರೇ, ಇದೇ ಶ್ರದ್ಧೆ, ಇಚ್ಛಾಶಕ್ತಿ ಉಳಿದ ಕಾಮಗಾರಿಯಲ್ಲಿ ಏಕೆ ತೋರಲಿಲ್ಲ? ಎಂದು ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಮಗಳ ಮದುವೆಗಾಗಿ ಏಕಾಏಕಿ ರಸ್ತೆ ಸಿದ್ಧಪಡಿಸುವ ಶಕ್ತಿ ಇದೆ ಎಂದಾದರೆ, ಉಳಿದ ಕಾಮಗಾರಿ ಮುಗಿಸಲು ಮತ್ತೊಮ್ಮೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಅಧಿಕಾರ ಕೊಡಿ ಎನ್ನಲು ನಾಚಿಕೆ ಎನಿಸುವುದಿಲ್ಲವೇ ,ಇಷ್ಟು ದಿನ ಹುಬ್ಬಳ್ಳಿ ಧಾರವಾಡದ ಪಾಲಿಕೆ ಬಿಜೆಪಿ ಆಡಳಿತದಲ್ಲಿದ್ದರೂ ನೀರಿನ ಸಮಸ್ಯೆ ಬಗೆಹರಿಯಲಿಲ್ಲ, ರಸ್ತೆ ಗುಂಡಿ ಮುಚ್ಚಲಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಮತ್ತೊಮ್ಮೆ ಅಧಿಕಾರ ಕೊಟ್ಟರೆ ಕೆಲಸ ಮುಗಿಸುತ್ತೇವೆ ಎನ್ನುವ ಪ್ರಹ್ಲಾದ ಜೋಶಿ ಅವರೇ, ಒಂದು ರಸ್ತೆಯಾಗಲು ನಿಮ್ಮ ಮಗಳ ಮದುವೆ ಬರಬೇಕಾಯ್ತು! ಇನ್ನುಳಿದ ಕೆಲಸ ಪೂರೈಸಲು ಯಾರದ್ದಾದರೂ ಬಿಜೆಪಿಗರ ಮದುವೆಯೇ ಬರಬೇಕು ಎಂದು ಟೀಕಿಸಿದೆ.

ಯಾವುದೇ ಚುನಾವಣೆ ಬರಲಿ ಬಿಜೆಪಿ ಪಕ್ಷದವರು ಸುಳ್ಳಿನ ರೈಲು ಬಿಡಲು ತಯಾರಾಗುತ್ತಾರೆ! ಕೇಂದ್ರದಲ್ಲೂ, ರಾಜ್ಯದಲ್ಲೂ ಬಿಜೆಪಿ, ಸಂಸದರು, ಶಾಸಕರೂ ಬಿಜೆಪಿ, ಒಬ್ಬರು ರಾಜ್ಯದ ಸಚಿವರಾಗಿದ್ದರು, ಮತ್ತೊಬ್ಬರು ಕೇಂದ್ರ ಸಚಿವರಾಗಿದ್ದಾರೆ. ಹೀಗಿದ್ದೂ ಯಾವ ಅಭಿವೃದ್ಧಿ ಮಾಡದೆ, ಹುಬ್ಬಳ್ಳಿ ಧಾರವಾಡದ ಜನರೆದುರು ಇನ್ನೂ ಬಣ್ಣದ ರೈಲನ್ನೇ ಬಿಡುತ್ತಿದ್ದಾರೆ ಎಂದು ಲೇವಡಿ ಮಾಡಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT