ಪ್ರಹ್ಲಾದ್ ಜೋಶಿ 
ರಾಜಕೀಯ

ಮಗಳ ಮದುವೆಗಾಗಿ ಏಕಾಏಕಿ ರಸ್ತೆ ಸಿದ್ಧಪಡಿಸುವ ಶಕ್ತಿ ಇದೆ ಎಂದಾದರೆ, ಉಳಿದ ಕಾಮಗಾರಿ ಮುಗಿಸಲು ಇಚ್ಛಾಶಕ್ತಿ ಏಕಿಲ್ಲ?

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಮಗಳ ಮದುವೆಗಾಗಿ ತುರಾತುರಿಯಲ್ಲಿ ರಸ್ತೆ ಸಿದ್ಧಪಡಿಸಿದ ಪ್ರಹ್ಲಾದ ಜೋಶಿ ಅವರೇ, ಇದೇ ಶ್ರದ್ಧೆ, ಇಚ್ಛಾಶಕ್ತಿ ಉಳಿದ ಕಾಮಗಾರಿಯಲ್ಲಿ ಏಕೆ ತೋರಲಿಲ್ಲ?

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಮಗಳ ಮದುವೆಗಾಗಿ ತುರಾತುರಿಯಲ್ಲಿ ರಸ್ತೆ ಸಿದ್ಧಪಡಿಸಿದ ಪ್ರಹ್ಲಾದ ಜೋಶಿ ಅವರೇ, ಇದೇ ಶ್ರದ್ಧೆ, ಇಚ್ಛಾಶಕ್ತಿ ಉಳಿದ ಕಾಮಗಾರಿಯಲ್ಲಿ ಏಕೆ ತೋರಲಿಲ್ಲ? ಎಂದು ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಮಗಳ ಮದುವೆಗಾಗಿ ಏಕಾಏಕಿ ರಸ್ತೆ ಸಿದ್ಧಪಡಿಸುವ ಶಕ್ತಿ ಇದೆ ಎಂದಾದರೆ, ಉಳಿದ ಕಾಮಗಾರಿ ಮುಗಿಸಲು ಮತ್ತೊಮ್ಮೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಅಧಿಕಾರ ಕೊಡಿ ಎನ್ನಲು ನಾಚಿಕೆ ಎನಿಸುವುದಿಲ್ಲವೇ ,ಇಷ್ಟು ದಿನ ಹುಬ್ಬಳ್ಳಿ ಧಾರವಾಡದ ಪಾಲಿಕೆ ಬಿಜೆಪಿ ಆಡಳಿತದಲ್ಲಿದ್ದರೂ ನೀರಿನ ಸಮಸ್ಯೆ ಬಗೆಹರಿಯಲಿಲ್ಲ, ರಸ್ತೆ ಗುಂಡಿ ಮುಚ್ಚಲಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಮತ್ತೊಮ್ಮೆ ಅಧಿಕಾರ ಕೊಟ್ಟರೆ ಕೆಲಸ ಮುಗಿಸುತ್ತೇವೆ ಎನ್ನುವ ಪ್ರಹ್ಲಾದ ಜೋಶಿ ಅವರೇ, ಒಂದು ರಸ್ತೆಯಾಗಲು ನಿಮ್ಮ ಮಗಳ ಮದುವೆ ಬರಬೇಕಾಯ್ತು! ಇನ್ನುಳಿದ ಕೆಲಸ ಪೂರೈಸಲು ಯಾರದ್ದಾದರೂ ಬಿಜೆಪಿಗರ ಮದುವೆಯೇ ಬರಬೇಕು ಎಂದು ಟೀಕಿಸಿದೆ.

ಯಾವುದೇ ಚುನಾವಣೆ ಬರಲಿ ಬಿಜೆಪಿ ಪಕ್ಷದವರು ಸುಳ್ಳಿನ ರೈಲು ಬಿಡಲು ತಯಾರಾಗುತ್ತಾರೆ! ಕೇಂದ್ರದಲ್ಲೂ, ರಾಜ್ಯದಲ್ಲೂ ಬಿಜೆಪಿ, ಸಂಸದರು, ಶಾಸಕರೂ ಬಿಜೆಪಿ, ಒಬ್ಬರು ರಾಜ್ಯದ ಸಚಿವರಾಗಿದ್ದರು, ಮತ್ತೊಬ್ಬರು ಕೇಂದ್ರ ಸಚಿವರಾಗಿದ್ದಾರೆ. ಹೀಗಿದ್ದೂ ಯಾವ ಅಭಿವೃದ್ಧಿ ಮಾಡದೆ, ಹುಬ್ಬಳ್ಳಿ ಧಾರವಾಡದ ಜನರೆದುರು ಇನ್ನೂ ಬಣ್ಣದ ರೈಲನ್ನೇ ಬಿಡುತ್ತಿದ್ದಾರೆ ಎಂದು ಲೇವಡಿ ಮಾಡಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT