ಸಿಟಿ ರವಿ 
ರಾಜಕೀಯ

ಭಾರತದಲ್ಲಿ ಹುಟ್ಟಿದ ಧರ್ಮಗಳಿಂದ ಮಾತ್ರ ಜಾತ್ಯತೀತತೆ ರಕ್ಷಿಸಲು ಸಾಧ್ಯ: ಸಿಟಿ ರವಿ

ಭಾರತದಲ್ಲಿ ಹುಟ್ಟಿದ ಧರ್ಮಗಳು ಮಾತ್ರ ಜಾತ್ಯತೀತತೆ ಮತ್ತು ಡಾ. ಬಿಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ರಕ್ಷಿಸಬಲ್ಲವು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಂಗಳವಾರ ಹೇಳಿದ್ದಾರೆ.

ಕಲಬುರಗಿ: ಭಾರತದಲ್ಲಿ ಹುಟ್ಟಿದ ಧರ್ಮಗಳು ಮಾತ್ರ ಜಾತ್ಯತೀತತೆ ಮತ್ತು ಡಾ. ಬಿಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ರಕ್ಷಿಸಬಲ್ಲವು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಟಿ ರವಿ, ಜನರು ತಮ್ಮ ವಾರ್ಡ್‌ಗಳು, ನಗರಗಳು ಅಥವಾ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಬೆಂಬಲಿಸದಿದ್ದರೆ ದೇಶದಲ್ಲಿ 'ಮಿನಿ ಪಾಕಿಸ್ತಾನ್‌ಗಳು' ಸೃಷ್ಟಿಯಾಗುತ್ತವೆ ಎಂದರು.

ಶುಕ್ರವಾರ ನಡೆಯಲಿರುವ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಆಗಮಿಸಿರುವ ಸಿಟಿ ರವಿ ಅವರು ಇಂದು ಕೆಲವು ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿದರು ಮತ್ತು ಬಿಜೆಪಿ ಪರವಾಗಿ ಜನರ ಪ್ರತಿಕ್ರಿಯೆ ಪ್ರೋತ್ಸಾಹದಾಯಕವಾಗಿದೆ ಎಂದಿದ್ದಾರೆ.

370ನೇ ವಿಧಿಯನ್ನು ರದ್ದುಗೊಳಿಸಲು ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ನಿಜವಾದ ಅರ್ಥದಲ್ಲಿ ಭಾರತದ ತೆಕ್ಕೆಗೆ ತರಲು ಬಿಜೆಪಿಯೇ ಅಧಿಕಾರಕ್ಕೆ ಬರಬೇಕಾಯಿತು ಎಂದು ಅವರು ಹೇಳಿದರು. 

ತಾನು ದಲಿತ ಕಲ್ಯಾಣದ ಚಾಂಪಿಯನ್ ಎಂದು ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಏಕೆ ಭಾರತ ರತ್ನ ನೀಡಲಿಲ್ಲ ಎಂದು ಸಿಟಿ ರವಿ ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT