ಸಿಟಿ ರವಿ 
ರಾಜಕೀಯ

ಭಾರತದಲ್ಲಿ ಹುಟ್ಟಿದ ಧರ್ಮಗಳಿಂದ ಮಾತ್ರ ಜಾತ್ಯತೀತತೆ ರಕ್ಷಿಸಲು ಸಾಧ್ಯ: ಸಿಟಿ ರವಿ

ಭಾರತದಲ್ಲಿ ಹುಟ್ಟಿದ ಧರ್ಮಗಳು ಮಾತ್ರ ಜಾತ್ಯತೀತತೆ ಮತ್ತು ಡಾ. ಬಿಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ರಕ್ಷಿಸಬಲ್ಲವು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಂಗಳವಾರ ಹೇಳಿದ್ದಾರೆ.

ಕಲಬುರಗಿ: ಭಾರತದಲ್ಲಿ ಹುಟ್ಟಿದ ಧರ್ಮಗಳು ಮಾತ್ರ ಜಾತ್ಯತೀತತೆ ಮತ್ತು ಡಾ. ಬಿಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ರಕ್ಷಿಸಬಲ್ಲವು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಟಿ ರವಿ, ಜನರು ತಮ್ಮ ವಾರ್ಡ್‌ಗಳು, ನಗರಗಳು ಅಥವಾ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಬೆಂಬಲಿಸದಿದ್ದರೆ ದೇಶದಲ್ಲಿ 'ಮಿನಿ ಪಾಕಿಸ್ತಾನ್‌ಗಳು' ಸೃಷ್ಟಿಯಾಗುತ್ತವೆ ಎಂದರು.

ಶುಕ್ರವಾರ ನಡೆಯಲಿರುವ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಆಗಮಿಸಿರುವ ಸಿಟಿ ರವಿ ಅವರು ಇಂದು ಕೆಲವು ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿದರು ಮತ್ತು ಬಿಜೆಪಿ ಪರವಾಗಿ ಜನರ ಪ್ರತಿಕ್ರಿಯೆ ಪ್ರೋತ್ಸಾಹದಾಯಕವಾಗಿದೆ ಎಂದಿದ್ದಾರೆ.

370ನೇ ವಿಧಿಯನ್ನು ರದ್ದುಗೊಳಿಸಲು ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ನಿಜವಾದ ಅರ್ಥದಲ್ಲಿ ಭಾರತದ ತೆಕ್ಕೆಗೆ ತರಲು ಬಿಜೆಪಿಯೇ ಅಧಿಕಾರಕ್ಕೆ ಬರಬೇಕಾಯಿತು ಎಂದು ಅವರು ಹೇಳಿದರು. 

ತಾನು ದಲಿತ ಕಲ್ಯಾಣದ ಚಾಂಪಿಯನ್ ಎಂದು ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಏಕೆ ಭಾರತ ರತ್ನ ನೀಡಲಿಲ್ಲ ಎಂದು ಸಿಟಿ ರವಿ ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT