ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವಿಟ್ಟರ್ ನಲ್ಲಿ ಹಾಕಿರುವ ಫೋಟೋ 
ರಾಜಕೀಯ

ಗುಲಾಮಗಿರಿ ಎಂಬ ಶಬ್ದಕ್ಕೆ ಪರ್ಯಾಯ ಪದವೇ ಕಾಂಗ್ರೆಸ್: ಪಾದಕ್ಕೆ ಎರಗುವ ಪರಿ ಹೇಗೆಂಬುದನ್ನು ಡಿಕೆಶಿ ನೋಡಿ ಕಲಿಯಿರಿ!

ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ತನ್ನ ವಾಗ್ದಾಳಿ ಮುಂದುವರಿಸಿದೆ. ರಾಜ್ಯದ ಬಿಜೆಪಿ ಸಂಸದರು ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ತೀಕ್ಷ್ಣವಾಗಿ ತಿರುಗೇಟು ನೀಡಿದೆ

ಬೆಂಗಳೂರು:  ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ತನ್ನ ವಾಗ್ದಾಳಿ ಮುಂದುವರಿಸಿದೆ. ರಾಜ್ಯದ ಬಿಜೆಪಿ ಸಂಸದರು ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ತೀಕ್ಷ್ಣವಾಗಿ ತಿರುಗೇಟು ನೀಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ‘ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ನಡೆಸುವುದಕ್ಕೂ ಪೈಪೋಟಿ ಇದೆ ಖಂಡ್ರೆಯವರೇ, ಏಕೋ ನಿಮ್ಮ ವೇಗ ಕಡಿಮೆಯಾಯ್ತು, ಹೀಗಾಗಿ ಇನ್ನೂ ಕಾರ್ಯಾಧ್ಯಕ್ಷ ಸ್ಥಾನದಲ್ಲೇ ಇದ್ದೀರಿ. ಪಾದಕ್ಕೆ ಎರಗುವ ಪರಿ ಹೇಗೆಂಬುದನ್ನು ಡಿಕೆಶಿ ಅವರನ್ನು ನೋಡಿ ಕಲಿಯಿರಿ’ ಎಂದು ಲೇವಡಿ ಮಾಡಿದೆ.

‘ಗುಲಾಮಗಿರಿ ಎಂಬ ಶಬ್ದಕ್ಕೆ ಪರ್ಯಾಯ ಪದವೇ ಕಾಂಗ್ರೆಸ್. ನೆಹರು, ಇಂದಿರಾ, ರಾಜೀವ್ ಮತ್ತು ಸೋನಿಯಾ ಗಾಂಧಿಯವರ ಪದತಲದಲ್ಲಿ ಗುಲಾಮಗಿರಿ ಮಾಡಿದ್ದಕ್ಕಾಗಿಯೇ ಮುಖ್ಯಮಂತ್ರಿ ಪದವಿ ಅಲಂಕರಿಸಿದ ಮಹಾನುಭಾವರ ಪಟ್ಟಿ ಬೇಕೇ ಖಂಡ್ರೆಯವರೇ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ಪ್ರಶ್ನಿಸಿದೆ.

ಗುಲಾಮಗಿರಿ ಎಂಬ ಶಬ್ದಕ್ಕೆ ಪರ್ಯಾಯ ಪದವೇ ಕಾಂಗ್ರೆಸ್. ನೆಹರು, ಇಂದಿರಾ, ರಾಜೀವ್ ಮತ್ತು ಸೋನಿಯಾ ಗಾಂಧಿಯವರ ಪದತಲದಲ್ಲಿ ಗುಲಾಮಗಿರಿ ಮಾಡಿದ್ದಕ್ಕಾಗಿಯೇ ಮುಖ್ಯಮಂತ್ರಿ ಪದವಿ ಅಲಂಕರಿಸಿದ ಮಹಾನುಭಾವರ ಪಟ್ಟಿ ಬೇಕೇ ಖಂಡ್ರೆಯವರೇ? ಕುಟುಂಬ ಭಜಕರು ಎಂದು ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT