ಸಂಗ್ರಹ ಚಿತ್ರ 
ರಾಜಕೀಯ

ವಿಧಾನ ಪರಿಷತ್ ಚುನಾವಣೆ ಪ್ರಚಾರ: ಬಿಜೆಪಿಯ 2 ಗುಂಪುಗಳ ನಡುವೆ ಮಾರಾಮಾರಿ

ಎಂಎಲ್'ಸಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮಂಗಳವಾರ ನಡೆದಿದೆ.

ಹಾಸನ: ಎಂಎಲ್'ಸಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮಂಗಳವಾರ ನಡೆದಿದೆ.

ವೀರಶೈವ ಕಲ್ಯಾಣ ಮಂಟಪದಲ್ಲಿ ನಿನ್ನೆ ಚುನಾವಣಾ ಪ್ರಚಾರ ಸಭೆ ನಿಗದಿಯಾಗಿತ್ತು. ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್, ಅಭ್ಯರ್ಥಿ ಹೆಚ್.ಎಂ.ವಿಶ್ವನಾಥ್, ಮುಖಂಡ ಎನ್.ಆರ್.ಸಂತೋಷ್ ಸೇರಿ ಹಲವರ ಜೊತೆಗೆ ಬಿಜೆಪಿ ಬೆಂಬಲದಿಂದ ಗೆದ್ದಿರುವ ಸ್ಥಳೀಯ ಸಂಸ್ಥೆಗಳ ಸದಸ್ಯರು, ಮುಖಂಡರೂ ಸಭೆಯಲ್ಲಿ ಭಾಗಿಯಾಗಿದ್ದರು.

ಸಚಿವರು ಮಾತನಾಡುವ ವೇಳೆ ಎರಡು ಬಣದ ನಡುವೆ ದಿಢೀರ್ ಜಗಳ ಶುರುವಾಗಿದೆ. ಚುನಾವಣಾ ಬೆಂಬಲ ನೀಡುವ ವಿಚಾರದಲ್ಲಿ ನೋಡ ನೋಡುತ್ತಿದ್ದಂತೆಯೇ ಕೈ ಕೈ ಮಿಲಾಯಿಸಿದ್ದಾರೆ.

ಬಿಜೆಪಿ ಮುಖಂಡ ಮರಿಸ್ವಾಮಿ ಅವರ ಬೆಂಬಲಿಗರಾದ ರಂಗನಾಥ್ ಎಂಬುವವರ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಎನ್ ಆರ್ ಸಂತೋಷ್ ಅವರ ಬೆಂಬಲಿಗರು ಹಲ್ಲೆ ನಡೆಸಿದರು. ಹಲ್ಲೆಯಿಂದ ರಂಗನಾಥ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.

ಬಿಜೆಪಿ ಮುಖಂಡ ಎನ್.ಆರ್.ಸಂತೋಷ್ ಅವರನ್ನು ವೇದಿಕೆ ಮೇಲೆ ಕುಳ್ಳಿರಿಸಿದಕ್ಕೆ ಸ್ಥಳದಲ್ಲಿದ್ದ ಮತ್ತೊಂದು ಬಣ ಆಕ್ಷೇಪ ವ್ಯಕ್ತಡಿಸಿತು. ಸಂತೋಷ್ ಅವರು ಮೂಲ ಬಿಜೆಪಿ ಮುಖಂಡರಿಗೆ ತೊಂದರೆ ಕೊಡುತ್ತಿದ್ದಾರೆ. ಸುಳ್ಳು ಪ್ರಕಱಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ. ಅಂತಹವರಿಗೆ ವೇದಿಕೆಯಲ್ಲಿ ಮಣೆ ಹಾಕುವುದಾದರೆ ನಾವೇಕೆ ಬೆಂಬಲ ಕೊಡಬೇಕು ಎಂದು ತಗಾದೆ ತೆಗೆದರು. ಇದು ಮಾರಾಮಾರಿಗೆ ಎಡೆ ಮಾಡಿಕೊಟ್ಟಿತು.

ಇದಕ್ಕೂ ಮುನ್ನ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ.ಸುರೇಶ್, ಮಾಜಿ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ ಸೇರಿದಂತೆ ಮುಖಂಡರು ಆಕ್ರೋಶಗೊಂಡ ಕಾರ್ಯಕರ್ತರನ್ನು ಸಮಾಧಾನಪಡಿಸಲು ಯತ್ನಿಸಿದರು, ಆದರೆ, ಅದರಿಂದ ಪ್ರಯೋಜನವಾಗಲಿಲ್ಲ. ಈ ಬೆಳವಣಿಗೆಯಿಂದ ಅರಸೀಕೆರೆ ಬಿಜೆಪಿಯಲ್ಲಿ ಬಣ ರಾಜಕೀಯ ಬೀದಿಗೆ ಬಿದ್ದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT