ಸೋಮಶೇಖರ್ 
ರಾಜಕೀಯ

ಮೈಸೂರಿನಲ್ಲಿ ಜೆಡಿಎಸ್ ಬೆಂಬಲ ಕೋರಿಲ್ಲ: ಸೋಮಶೇಖರ್

ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿರುವ ಬಿಜೆಪಿ, ಡಿ.10ರಂದು ನಡೆಯಲಿರುವ ಮೈಸೂರು-ಚಾಮರಾಜನಗರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿದೆ.

ಮೈಸೂರು: ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿರುವ ಬಿಜೆಪಿ, ಡಿ.10ರಂದು ನಡೆಯಲಿರುವ ಮೈಸೂರು-ಚಾಮರಾಜನಗರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿದೆ.

ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಪ್ರತಿಕ್ರಿಯೆ ನೀಡಿ, ಪಕ್ಷ ಸಂಘಟಿತವಾಗಿ ಕೆಲಸ ಮಾಡುತ್ತಿದ್ದು, ಎಲ್ಲಾ ಪಂಚಾಯಿತಿ ಸದಸ್ಯರನ್ನೂ ತಲುಪಲಿದೆ. ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಿಗುವುದು ಖಚಿತ ಎಂದು ಹೇಳಿದ್ದಾರೆ.

ಇದೇ ವೇಳೆ  ಎರಡನೇ ಪ್ರಾಶಸ್ತ್ಯದ ಮತಗಳನ್ನು ಬಿಜೆಪಿಗೆ ಹಾಕದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪಂಚಾಯತ್ ಸದಸ್ಯರಿಗೆ ಕರೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿ, ಮೂರೂ ಪಕ್ಷಗಳ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತಗಳನ್ನು ಕೇಳುತ್ತಿದ್ದಾರೆಂದು ತಿಳಿಸಿದ್ದಾರೆ.

"ಪಂಚಾಯತ್ ಸದಸ್ಯರು ಪ್ರಬುದ್ಧರಾಗಿದ್ದಾರೆ ಮತ್ತು ಶೇಕಡಾ 70 ಕ್ಕಿಂತ ಹೆಚ್ಚು ಯುವಕರು ಪರಿಷತ್'ಗೆ ಯಾರನ್ನು ಆಯ್ಕೆ ಮಾಡಬೇಕೆಂದು ನಿರ್ಧರಿಸಲಿದ್ದಾರೆ ಎಂದು ಹೇಳಿದರು.

ಬಳಿಕ ಡಿ.5ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಭಯ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿ ಆರ್.ರಘು ಪರ ಪ್ರಚಾರ ನಡೆಸಲಿದ್ದಾರೆ.ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ಹುಣಸೂರು ತಾಲೂಕುಗಳಲ್ಲಿ ಪ್ರವಾಸ ಕೈಗೊಂಡು ಪ್ರಚಾರ ನಡೆಸಲು 15 ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಯಾವೆಲ್ಲಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲವೋ ಆ ಕ್ಷೇತ್ರದಲ್ಲಿ ಪಕ್ಷಕ್ಕೆ ಬೆಂಬಲ ನೀಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಮನವಿ ಮಾಡಿಕೊಂಡಿದ್ದಾರಷ್ಟೇ, ಮೈಸೂರಿನಲ್ಲಿ ಜೆಡಿಎಸ್ ಬೆಂಬಲ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT