ರಮೇಶ್ ಜಾರಕಿಹೊಳಿ 
ರಾಜಕೀಯ

ವಾರ್ ಆದ್ರೂ ಚಿಂತೆಯಿಲ್ಲ, ಡಿಸೆಂಬರ್ 14 ರ ನಂತರ ಡಿಕೆಶಿಗೆ ನಾನು ಏನೆಂಬುದನ್ನು ತೋರಿಸುತ್ತೇನೆ: ರಮೇಶ್ ಜಾರಕಿಹೊಳಿ

ವಾರ್ ಆದ್ರೂ ಚಿಂತೆಯಿಲ್ಲ. ಡಿಸೆಂಬರ್ 14ಕ್ಕೆ ನಾನು ಏನೆಂಬುದನ್ನು ತೋರಿಸುತ್ತೀನೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ.

ಬೆಳಗಾವಿ: ವಾರ್ ಆದ್ರೂ ಚಿಂತೆಯಿಲ್ಲ. ಡಿಸೆಂಬರ್ 14ಕ್ಕೆ ನಾನು ಏನೆಂಬುದನ್ನು ತೋರಿಸುತ್ತೀನೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ.

ದೆಹಲಿಯಿಂದ ವಾಪಸಾದ ನಂತರ  ಮಾಧ್ಯಮಗಳೊಂದಿಗ ಮಾತನಾಡಿದ ಅವರು, ಬೇರೆಯವರ ಹಾಗೆ ನಾನು ಹತಾಶ ಮನೋಭಾವದಿಂದ ಮಾತನಾಡುವುದಿಲ್ಲ. ವಿಧಾನ ಪರಿಷತ್ ಚುನಾವಣೆ ಮುಗಿದ ಬಳಿಕ ಡಿ. ಕೆ. ಶಿವಕುಮಾರ್ ವ್ಯಕ್ತಿತ್ವ ಹಾಗೂ ನನ್ನ ವ್ಯಕ್ತಿತ್ವ ಏನು ಎಂಬುದನ್ನು ಹೇಳುತ್ತೇನೆ ಎಂದರು. ಬೇಕಿದ್ದರೆ ವಾರ್ ಆಗಲಿ ಎಂದು ಸವಾಲು ಹಾಕಿದ್ದಾರೆ.

ನನ್ನ ಬಗ್ಗೆ ಡಿ. ಕೆ. ಶಿವಕುಮಾರ್ ಏನೇ ಆರೋಪ ಮಾಡಿದರೂ ನಾನು ಈಗ ಉತ್ತರ ಕೊಡುವುದಿಲ್ಲ‌. ನಾನು ಈಗ ಚುನಾವಣೆಯ ಮೂಡ್‌ನಲ್ಲಿದ್ದೇನೆ. ನನ್ನ ಶಕ್ತಿ ಏನೆಂದು ಡಿ. ಕೆ. ಶಿವಕುಮಾರ್ ಬೆಳಗಾವಿಗೆ ಬಂದು ಮಾತನಾಡಿದ್ದನ್ನು ತೆಗೆದು ನೋಡಿ ಎಂದು ರಮೇಶ್ ಜಾರಕಿಹೊಳಿ ನೆನಪಿಸಿದರು.

1985 ರಿಂದ ಇಲ್ಲಿಯವರೆಗೆ ನಡೆದ ಎಲ್ಲಾ ವಿಚಾರದ ಬಗ್ಗೆ ಬಹಿರಂಗವಾಗಿ ಮಾತನಾಡುತ್ತೇನೆ. ಆಗ ನನ್ನ ವ್ಯಕ್ಯಿತ್ವ ಏನು, ಡಿಕೆಶಿ ವ್ಯಕ್ತಿತ್ವ ಏನು ಎಂದು ಹೇಳುತ್ತೇನೆ. ಓಪನ್ ವಾರ್ ಆಗಲಿ ಅಂದು ರಮೇಶ್ ಜಾರಕಿಹೊಳಿ ಖಡಕ್ಕಾಗಿ ಹೇಳಿದರು. ಫಲಿತಾಂಶದ ದಿನವೇ ಎಲ್ಲಕ್ಕೂ ಉತ್ತರ ಕೊಡುತ್ತೇನೆ ಎಂದು ಖಾರವಾಗಿ ಉತ್ತರಿಸಿದರು‌.

1 ಗಂಟೆ ಸುದ್ದಿಗೋಷ್ಠಿ ನಡೆಸಿ ಡಿಕೆಶಿ ಕುಟುಂಬ, ಜಾರಕಿಹೊಳಿ ಕುಟುಂಬದ ನಡುವೆ ಏನಿತ್ತು ಎಂಬುದರ ಬಗ್ಗೆ ಬಹಿರಂಗವಾಗಿ ಹೇಳುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನನ್ನ ಮೇಲೆ ದಿಲ್ಲಿ ವರಿಷ್ಠರ ಆಶೀರ್ವಾದ ಇರುವುದರಿಂದ ಇಂದು ನಾನು ಜೀವಂತ ಇದ್ದೇನೆ. ಇಲ್ಲವಾದ್ರೆ ಇಷ್ಟೊತ್ತಿಗೆ ನನ್ನನ್ನು ಮುಗಿಸಿ ಬಿಡುತ್ತಿದ್ದರು. ಇಷ್ಟೊತ್ತಿಗೆ ನನ್ನ ವಿರುದ್ಧ ಷಡ್ಯಂತ್ರ ಮಾಡಿ ಮುಗಿಸಿ ಬಿಡುತ್ತಿದ್ದರು.

ಸಂಘ ಪರಿವಾರದ ನಾಯಕರ ಬೆಂಬಲದಿಂದ ನಾಯಕನಾಗಿದ್ದೇನೆ ಎಂದ ರಮೇಶ್ ಜಾರಕಿಹೊಳಿ, ಬ್ಲ್ಯಾಕ್ ಮೇಲ್ ಯಾರು ಮಾಡ್ತಾರೆ ಎಂದು 14 ನೇ ತಾರೀಕು ಹೇಳುತ್ತೇನೆ. ಈಗ ಇರುವ ಎಂಎಲ್ಎಗಳನ್ನು ಉಳಿಸಿಕೊಳ್ಳಿ ಆಮೇಲೆ ನೋಡೊಣ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT