ಟಿಎಂಸಿ ಬಾವುಟ( ಸಂಗ್ರಹ ಚಿತ್ರ) 
ರಾಜಕೀಯ

2023ರ ಕರ್ನಾಟಕ ವಿಧಾನಸಭೆ ಚುನಾವಣೆ ಮೇಲೆ ಟಿಎಂಸಿ ಕಣ್ಣು: ರಾಜ್ಯ ಕಾಂಗ್ರೆಸ್ ನಾಯಕರ ಓಲೈಕೆ!

ಇತ್ತೀಚೆಗೆ ಮಾಜಿ ಸಚಿವ ಎಂ ಬಿ ಪಾಟೀಲ್  ಅವರನ್ನು ಟಿಎಂಸಿ ಪರವಾಗಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್  ಭೇಟಿ ಮಾಡಿದ್ದರು ಎಂಬ ವರದಿಗಳು ಕೇಳಿ ಬಂದಿದ್ದವು, ಆದರೆ ಇದೆಲ್ಲಾ ಸುಳ್ಳು ಎಂದು ತಳ್ಳಿ ಹಾಕಿದ್ದರು.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮೇಲೆ ತೃಣಮೂಲ ಕಾಂಗ್ರೆಸ್ ಕಣ್ಣಿಟ್ಟಿದೆ.

ಇತ್ತೀಚೆಗೆ ಮಾಜಿ ಸಚಿವ ಎಂ ಬಿ ಪಾಟೀಲ್  ಅವರನ್ನು ಟಿಎಂಸಿ ಪರವಾಗಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್  ಭೇಟಿ ಮಾಡಿದ್ದರು ಎಂಬ ವರದಿಗಳು ಕೇಳಿ ಬಂದಿದ್ದವು, ಆದರೆ ಇದೆಲ್ಲಾ ಸುಳ್ಳು ಎಂದು ತಳ್ಳಿ ಹಾಕಿದ್ದರು.

ಪ್ರಶಾಂತ್ ಕಿಶೋರ್ ನಿಜವಾಗಿಯೂ ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಅದರ ಬಗ್ಗೆ ಅವರಿಗೆ ತಿಳಿದಿದೆ ಎಂದು ಉನ್ನತ ಸ್ಥಾನದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.  ಆದರೆ ಈ ವಿಷಯದ ಬಗ್ಗೆ ಈಗ ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಕೆಲವು ಪ್ರಮುಖ ನಾಯಕರನ್ನು ಪ್ರಶಾಂತ್ ಕಿಶೋರ್ ಸಂಪರ್ಕಿಸಿದ್ದಾರೆ.  ವಿಧಾನಪರಿಷತ್ ಸದಸ್ಯರಾಗಿರುವ ರಾಜಕೀಯ ಮ್ಯಾನೇಜರ್ ಟಿಎಂಸಿ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗೋವಾದಲ್ಲಿ ಕಾಂಗ್ರೆಸ್ ಜಿಎಫ್ ಪಿ ಮೈತ್ರಿ ಮಾಡಿಕೊಂಡಿದ್ದು, ಕರ್ನಾಟಕದಲ್ಲಿಯೂ ಅದೇ ರೀತಿ ಟಿಎಂಸಿ ತಂತ್ರ ರೂಪಿಸಲು ಮುಂದಾಗಿದೆ,  ಬುಧವಾರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡಲು ಮುಂಬೈಗೆ ಬಂದಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಲ್ಲಾ ಪ್ರಾದೇಶಿಕ ಪಕ್ಷಗಳು ಒಗ್ಗೂಡಿದರೆ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಲಿಸುವುದು ತುಂಬಾ ಸುಲಭ ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT