ಮಂಡ್ಯ: ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಜೆಡಿಎಸ್ ಪಕ್ಷಕ್ಕೆ ಸಮಾನ ವೈರಿಗಳು ಎಂದು ಹೇಳಿಕೆ ನೀಡಿದ್ದಾರೆ.
ಮುಂಬರಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪನವರು ಜೆಡಿಎಸ್ ಪಕ್ಷದ ಸಹಕಾರ ಕೋರಿದ್ದಾರೆಯೇ ವಿನಾ ಮೈತ್ರಿಯನ್ನಲ್ಲ ಎಂದು ಕುಮಾರಸ್ವಾಮಿ ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಬಿಎಸ್ವೈ, ಹೆಚ್ಡಿಕೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ: ಸಿಎಂ ಬೊಮ್ಮಾಯಿ
ತಾವು ಎಲ್ಲಿಯೂ ಜೆಡಿಎಸ್ ಪಕ್ಷ ಬೇರೊಂದು ಪಕ್ಷದೊಡನೆ ಮೈತ್ರಿ ಮಾಡಿಕೊಳ್ಳುತ್ತಿದೆ ಎನ್ನುವುದನ್ನು ಹೇಳಿಲ್ಲ. ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದ ಕ್ಷೇತ್ರಗಳಲ್ಲಿ ಪಕ್ಷ ಯಾವ ಕಾರ್ಯತಂತ್ರ ರೂಪಿಸಬೇಕು ಎನ್ನುವುದನ್ನು ಕುಮಾರಸ್ವಾಮಿ ನಿರ್ಧರಿಸುವುದಾಗಿ ದೇವೇಗೌಡರು ತಿಳಿಸಿದ್ದರು.
ಇದನ್ನೂ ಓದಿ: ಗೆಲ್ಲುವ ಕ್ಷೇತ್ರದ ಟಿಕೆಟ್ ಕುಟುಂಬಕ್ಕೆ; ಸೋಲುವ ಕಡೆ ಅನ್ಯರಿಗೆ: ಪ್ರಧಾನಿ ಮೋದಿ ಜೊತೆ ದೇವೇಗೌಡರು ಈಗ ಭಾಯಿ ಭಾಯಿ!
ಡಿಸೆಂಬರ್ 10ರಿಂದ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದೇ ಇರುವ ಕ್ಷೇತ್ರಗಳಲ್ಲಿ ಪಕ್ಷ ಬಿಜೆಪಿಗೆ ಸಹಕಾರ ನೀಡುವಂತೆ ಬಿಜೆಪಿ ನಾಯಕ ಯಡಿಯೂರಪ್ಪ ಮುಕ್ತವಾಗಿ ಕೋರಿಕೊಂಡಿದ್ದರು.
ಇದನ್ನೂ ಓದಿ: ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಗ್ಯಾರಂಟಿ!: ಪ್ರಧಾನಿ ಮೋದಿ ಜೊತೆ ಸಭೆ ಬಳಿಕ ದೇವೇಗೌಡ ಹೇಳಿದ್ದೇನು?
ಈ ಬಗ್ಗೆ ಕೇಳಲಾಗಿ ಯಡಿಯೂರಪ್ಪನವರು ಬಿಜೆಪಿ ಪಕ್ಷ ಯಾವುದೇ ಪಕ್ಷದೊಡನೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಸ್ಪರ್ಧಿಸುತ್ತಿರುವ ಕ್ಷೇತ್ರಗಳಲ್ಲಿ ಪಕ್ಷ ಹಗಲು ರಾತ್ರಿ ವಿಜಯಕ್ಕೆ ಶ್ರಮಿಸುವುದಾಗಿ ತಿಳಿಸಿದ್ದಾರೆ.