ಮೈಸೂರಿನಲ್ಲಿ ಪ್ರಚಾರ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಮತ್ತಿತರರು 
ರಾಜಕೀಯ

ವಿಧಾನಪರಿಷತ್ ಚುನಾವಣೆ: ಮೂರು ಜಿಲ್ಲೆಗಳಲ್ಲಿ ಪ್ರಚಾರ ಆರಂಭಿಸಿದ ಬಿಎಸ್ ಯಡಿಯೂರಪ್ಪ 

 ಡಿಸೆಂಬರ್ 10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗಾಗಿ  ಮೈಸೂರು- ಚಾಮರಾಜನಗರ ಹಾಗೂ ಮಂಡ್ಯ ಮತ ಕ್ಷೇತ್ರದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಚಾರ ನಡೆಸಿದರು. 

ಮೈಸೂರು: ಡಿಸೆಂಬರ್ 10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗಾಗಿ  ಮೈಸೂರು- ಚಾಮರಾಜನಗರ ಹಾಗೂ ಮಂಡ್ಯ ಮತ ಕ್ಷೇತ್ರದಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಚಾರ ನಡೆಸಿದರು. 

ಮೊದಲಿಗೆ ಮಂಡ್ಯದಲ್ಲಿ ಸ್ಥಳೀಯ ಸಂಸ್ಥೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ, ತಾನು ಮಂಡ್ಯದ ಮಗ ಎಂಬ ಹೆಮ್ಮೆಯಿದೆ ಎಂದರು. 

 ಬಿಜೆಪಿ ಅಭ್ಯರ್ಥಿ ಎಂಸಿ ಮಂಜು ಪರವಾಗಿ ಪ್ರಚಾರ ನಡೆಸಿದ ಯಡಿಯೂರಪ್ಪ, ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಕ್ಕರೂ ಅವರು ಗೆಲ್ಲುತ್ತಾರೆ ಎಂಬ ಊಹೆ ಇತ್ತು. ಆದರೆ, ಅದು ಇದೀಗ ಬದಲಾಗಿದೆ.  ರಾಜ್ಯದಲ್ಲಿ ಒಂದು ಅಥವಾ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತಾರೆಂಬ ವಿಶ್ವಾಸ ಹಳೆಯ ಪಕ್ಷಕ್ಕೆ ಇಲ್ಲ. 26 ರಾಜ್ಯಗಳಲ್ಲಿ ಉಸಿರಾಟವನ್ನು ಕಾಂಗ್ರೆಸ್ ನಿಲ್ಲಿಸಿದೆ. ಮುಂದಿನ ಚುನಾವಣೆಯೊಳಗೆ ಕರ್ನಾಟಕದಲ್ಲಿಯೂ ಉಸಿರಾಡುವುದನ್ನು ನಿಲ್ಲಿಸಲಿದೆ ಎಂದರು.

ಮೈಸೂರಿನ ರಾಜೇಂದ್ರ ಕಾನ್ವೆಷನ್ ಹಾಲ್ ಹಾಗೂ ಚಾಮರಾಜನಗರ ಜಿಲ್ಲೆಯ ಸಂತೇಮಾರನಹಳ್ಳಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ, ಮೈಸೂರು- ಚಾಮರಾಜನಗರ ಮತ ಕ್ಷೇತ್ರದ ಅಭ್ಯರ್ಥಿ ರಘು ಕೌಟಿಲ್ಯ ಅವರನ್ನು ಬೆಂಬಲಿಸುವಂತೆ ಕೋರಿದರು. ಪಕ್ಷದ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಗ್ರಾಮ ಪಂಚಾಯಿತಿ ಸದಸ್ಯರಲ್ಲಿ ಅವರು ಮನವಿ ಮಾಡಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT