ಡಿಕೆ.ಶಿವಕುಮಾರ್ 
ರಾಜಕೀಯ

ಬಿಜೆಪಿಗೆ ಬೆಂಬಲ ಕೊಡಲಿಲ್ಲವೆಂದು ನನ್ನನ್ನು ಜೈಲಿಗೆ ಕಳಿಸಿದ್ದರು: ಡಿ.ಕೆ.ಶಿವಕುಮಾರ್

ಬಿಜೆಪಿಗೆ ಬೆಂಬಲ ನೀಡಲಿಲ್ಲ, ಬಿಜೆಪಿಗೆ ಸೇರಲಿಲ್ಲವೆಂಬ ಕಾರಣಕ್ಕೆ ನನ್ನನ್ನು ಜೈಲಿಗೆ ಕಳುಹಿಸಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಸೋಮವಾರ ಆರೋಪಿಸಿದ್ದಾರೆ.

ಬೆಳಗಾವಿ: ಬಿಜೆಪಿಗೆ ಬೆಂಬಲ ನೀಡಲಿಲ್ಲ, ಬಿಜೆಪಿಗೆ ಸೇರಲಿಲ್ಲವೆಂಬ ಕಾರಣಕ್ಕೆ ನನ್ನನ್ನು ಜೈಲಿಗೆ ಕಳುಹಿಸಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಸೋಮವಾರ ಆರೋಪಿಸಿದ್ದಾರೆ.

ಡಿಕೆ.ಶಿವಕುಮಾರ್ ಅವರು ತಿಹಾರ್ ಜೈಲಿಗೆ ಯಾಕೆ ಹೋಗಿದ್ದರೆಂದು ಹೇಳಿದ್ದ ಸಚಿವ ಕೆಎಸ್ ಈಶ್ವರಪ್ಪ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜೈಲಿಗೆ ಯಾಕೆ ಹೋದೆ ಅಂದ್ರೆ ನೀವು ಕಳಿಸಿದ್ರಿ ನಾನು ಹೋದೆ. ನಿಮಗೆ ಸಪೋರ್ಟ್ ಮಾಡಲಿಲ್ಲ, ನಿಮ್ಮ ಜೊತೆ ಬರಲಿಲ್ಲ. ಹೀಗಾಗಿ ನೀವು ನನ್ನನ್ನು ತಿಹಾರ್ ಜೈಲಿಗೆ ಕಳಿಸಿದ್ರಿ ಎಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಉಸಿರು ನಿಲ್ಲಿಸುತ್ತೇವೆ ಎಂಬ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದ ಅವರು. ಬಿಎಸ್​ವೈ ತಮಗಾದ ನೋವನ್ನು ಬಿಜೆಪಿ ಮೇಲೆ ಹೇಳಲಾಗಲ್ಲ. ಅವರ ದುಃಖ, ದುಮ್ಮಾನ, ರೇಡ್, ಮಾನಸಿಕ ಹಿಂಸೆ ರಾಜೀನಾಮೆಯ ನೋವನ್ನು ಹೊರಹಾಕಬೇಕು. ನಾವು ಫ್ರೀಯಾಗಿದೀವಿ ಎಂದು ನಮ್ಮ ಮೇಲೆ ಹಾಕುತ್ತಿದ್ದಾರೆ. ನಮ್ಮನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಕೂರಿಸಲಿ. ಸರ್ಕಾರದ ಸ್ಥಿರತೆಯನ್ನು ನಾವು ಹಾಳು ಮಾಡುತ್ತಿಲ್ಲ. ಅವರ ಪಕ್ಷದವರೇ ಹಾಳು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT