ಲಕ್ಷ್ಮಣ ಸವದಿ 
ರಾಜಕೀಯ

ಲಖನ್ ಜಾರಕಿಹೊಳಿ ಪಕ್ಷದ ಸದಸ್ಯನಾಗಿರದ ಕಾರಣ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಲ್ಲ: ಸವದಿ

ಡಿಸಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಭಾಗದ ಶಾಸಕರು ಮತ್ತು ಸಂಸದರ ಜೊತೆ ಪ್ರತ್ಯೇಕ ಸಭೆ ನಡೆಸಿದರು ಎಂದು ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬೆಳಗಾವಿ:  ಡಿಸಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಭಾಗದ ಶಾಸಕರು ಮತ್ತು ಸಂಸದರ ಜೊತೆ ಪ್ರತ್ಯೇಕ ಸಭೆ ನಡೆಸಿದರು ಎಂದು ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸವದಿ, ಉತ್ತರ ಕರ್ನಾಟಕ ಭಾಗದ ಎಲ್ಲಾ ಶಾಸಕರು , 10 ದಿನಗಳ ಕಾಲ  ನಡೆಯುವ ಅಧಿವೇಶನದಲ್ಲಿ ಭಾಗವಹಿಸಬೇಕೆಂಬುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಶಯವಾಗಿದೆ, ಅಧಿವೇಶನದ ಲ್ಲಿ ನೀರಾವರಿ ಯೋಜನೆಗಳು ಮತ್ತು ಬೆಳೆ ಹಾನಿಯ ಬಗ್ಗೆ ಚರ್ತಿಸಲಾಗುವುದು.

ಬಿಜೆಪಿಯಲ್ಲಿ ಒಂದೇ ಮನೆ ಒಂದೇ ಬಾಗಿಲು, ಆದರೆ ಕಾಂಗ್ರೆಸ್ ನಲ್ಲಿ ಒಂದು ಮನೆ ಮತ್ತು ಮೂರು ಬಾಗಿಲುಗಳು, ಹಿರಿಯ ನಾಯಕ ಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೂರು ಬಾಗಿಲುಗಳು ಎಂದು ಸವದಿ ಲೇವಡಿ ಮಾಡಿದ್ದಾರೆ.

ಸ್ವತಂತ್ರ್ಯ ಅಭ್ಯರ್ಥಿ ಲಖನ್ ಜಾರಕಿಹೊಳಿ ಬಿಜೆಪಿಯ ಬಂಡಾಯ ಅಭ್ಯರ್ಥಿಯಲ್ಲ ಎಂದು ಸವದಿ ಸ್ಪಷ್ಟ ಪಡಿಸಿದ್ದಾರೆ. ಲಖನ್ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ಗೋಕಾಕ್ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಲಖನ್ ಎಂದಿಗೂ ಬಿಜೆಪಿ ಸದಸ್ಯನಾಗಿರಲಿಲ್ಲ, ಅವರು ಪಕ್ಷದ ಸದಸ್ಯನಾಗಿದ್ದರೆ ಮಾತ್ರ ಬಿಜೆಪಿಯ ಬಂಡಾಯಗಾರರಾಗುತ್ತಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT