ಲಕ್ಷ್ಮಣ ಸವದಿ 
ರಾಜಕೀಯ

ಲಖನ್ ಜಾರಕಿಹೊಳಿ ಪಕ್ಷದ ಸದಸ್ಯನಾಗಿರದ ಕಾರಣ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಲ್ಲ: ಸವದಿ

ಡಿಸಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಭಾಗದ ಶಾಸಕರು ಮತ್ತು ಸಂಸದರ ಜೊತೆ ಪ್ರತ್ಯೇಕ ಸಭೆ ನಡೆಸಿದರು ಎಂದು ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬೆಳಗಾವಿ:  ಡಿಸಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಭಾಗದ ಶಾಸಕರು ಮತ್ತು ಸಂಸದರ ಜೊತೆ ಪ್ರತ್ಯೇಕ ಸಭೆ ನಡೆಸಿದರು ಎಂದು ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸವದಿ, ಉತ್ತರ ಕರ್ನಾಟಕ ಭಾಗದ ಎಲ್ಲಾ ಶಾಸಕರು , 10 ದಿನಗಳ ಕಾಲ  ನಡೆಯುವ ಅಧಿವೇಶನದಲ್ಲಿ ಭಾಗವಹಿಸಬೇಕೆಂಬುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಶಯವಾಗಿದೆ, ಅಧಿವೇಶನದ ಲ್ಲಿ ನೀರಾವರಿ ಯೋಜನೆಗಳು ಮತ್ತು ಬೆಳೆ ಹಾನಿಯ ಬಗ್ಗೆ ಚರ್ತಿಸಲಾಗುವುದು.

ಬಿಜೆಪಿಯಲ್ಲಿ ಒಂದೇ ಮನೆ ಒಂದೇ ಬಾಗಿಲು, ಆದರೆ ಕಾಂಗ್ರೆಸ್ ನಲ್ಲಿ ಒಂದು ಮನೆ ಮತ್ತು ಮೂರು ಬಾಗಿಲುಗಳು, ಹಿರಿಯ ನಾಯಕ ಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೂರು ಬಾಗಿಲುಗಳು ಎಂದು ಸವದಿ ಲೇವಡಿ ಮಾಡಿದ್ದಾರೆ.

ಸ್ವತಂತ್ರ್ಯ ಅಭ್ಯರ್ಥಿ ಲಖನ್ ಜಾರಕಿಹೊಳಿ ಬಿಜೆಪಿಯ ಬಂಡಾಯ ಅಭ್ಯರ್ಥಿಯಲ್ಲ ಎಂದು ಸವದಿ ಸ್ಪಷ್ಟ ಪಡಿಸಿದ್ದಾರೆ. ಲಖನ್ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ಗೋಕಾಕ್ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಲಖನ್ ಎಂದಿಗೂ ಬಿಜೆಪಿ ಸದಸ್ಯನಾಗಿರಲಿಲ್ಲ, ಅವರು ಪಕ್ಷದ ಸದಸ್ಯನಾಗಿದ್ದರೆ ಮಾತ್ರ ಬಿಜೆಪಿಯ ಬಂಡಾಯಗಾರರಾಗುತ್ತಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT