ಡಿ.ಕೆ.ಶಿವಕುಮಾರ್ 
ರಾಜಕೀಯ

ಬೆಳಗಾವಿ ಅಧಿವೇಶನ: ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆಗೆ ಡಿ.ಕೆ.ಶಿವಕುಮಾರ್ ವಿರೋಧ

ಕ್ರೈಸ್ತ ಸಮುದಾಯ ಶಿಕ್ಷಣ, ಆರೋಗ್ಯ ಮತ್ತಿತರ ಸಮಾಜ ಸೇವೆಗಳ ಮೂಲಕ ಗಮನ ಸೆಳೆದಿದೆ.‌ ಗೌರವದಿಂದ ಸೇವೆ ಮಾಡುತ್ತಾ ಬಂದಿದೆ. ಅವರ ಮನಸ್ಸಿಗೆ ನೋವುಂಟು ಮಾಡುವುದು ಸರಿಯಲ್ಲ- ಡಿಕೆಶಿ

ಬೆಂಗಳೂರು: ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆಗೆ ಸರಕಾರ ಗಂಭೀರ ಚಿಂತನೆ ನಡೆಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಬೆಳಗಾವಿ ಅಧಿವೇಶನದಲ್ಲಿ  ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ ಕಾಯಿದೆಗೆ ದುರುದ್ದೇಶಪೂರಿತ ಹೆಚ್ಚುವರಿ ತಿದ್ದುಪಡಿ ತರಲು ಕಾಂಗ್ರೆಸ್ ಪಕ್ಷದ ಸಂಪೂರ್ಣ ವಿರೋಧವಿದೆ.

ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಸರಕಾರ ದ್ವೇಷದ ರಾಜಕೀಯ ಮಾಡುತ್ತಿದೆ. ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ, ಸಮುದಾಯಗಳಿಗೂ ಸಮಾನ ಗೌರವವಿದೆ. ಧಾರವಾಡ, ಕೊಡಗು ಮತ್ತಿತರ ಕಡೆ ಈಗಾಗಲೇ ಏನೇನಾಯ್ತು ಎಂಬುದು ಎಲ್ಲರಿಗೂ ಗೊತ್ತಿದೆ. ನಮ್ಮದು ಜಾತ್ಯತೀತ ದೇಶ, ರಾಜ್ಯ. ಇಡೀ ವಿಶ್ವ ನಮ್ಮನ್ನು ಗಮನಿಸುತ್ತಿದೆ. ಚರ್ಚ್ ಮೇಲಿನ ದಾಳಿ, ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆ ಸರಿಯಲ್ಲ. ಬಿಜೆಪಿ ಸರಕಾರ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದರು. ಇದರಿಂದ ರಾಜ್ಯದ ಗೌರವಕ್ಕೆ ಕುಂದು ಬರುವುದಲ್ಲದೆ, ಕಾನೂನು ಮತ್ತು ಸುವ್ಯವಸ್ಥೆಗೂ ಭಂಗವಾಗಲಿದೆ ಎಂದರು.

ಕ್ರೈಸ್ತ ಸಮುದಾಯ ಶಿಕ್ಷಣ, ಆರೋಗ್ಯ ಮತ್ತಿತರ ಸಮಾಜ ಸೇವೆಗಳ ಮೂಲಕ ಗಮನ ಸೆಳೆದಿದೆ.‌ ಗೌರವದಿಂದ ಸೇವೆ ಮಾಡುತ್ತಾ ಬಂದಿದೆ. ಅವರ ಮನಸ್ಸಿಗೆ ನೋವುಂಟು ಮಾಡುವುದು ಸರಿಯಲ್ಲ ಎಂದು ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT