ಸಂದೇಶ್ ನಾಗರಾಜ್ 
ರಾಜಕೀಯ

ಟಿಕೆಟ್ ತಪ್ಪಲು ಮೈಸೂರು 'ಮಹಾರಾಜ' ಕಾರಣ: ಅಪ್ಪ-ಮಗ ಕಿತ್ತಾಡಿ ನನಗೆ ಅವಮಾನ ಮಾಡಿದರು; ಸಂದೇಶ್ ನಾಗರಾಜ್

ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ಕೈತಪ್ಪಲು ಮೈಸೂರು ಮಹಾರಾಜರು ಕಾರಣ ಎಂದು ಸಂದೇಶ್ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಟಿಕೆಟ್ ಕೈತಪ್ಪಲು ಮೈಸೂರು ಮಹಾರಾಜರು ಕಾರಣ ಎಂದು ಸಂದೇಶ್ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್, ಜೆಡಿಎಸ್ ಮುಖ್ಯಸ್ಥ ಎಚ್.ಡಿ ದೇವೇಗೌಡ ಮತ್ತು ಎಚ್.ಡಿ ರೇವಣ್ಣ ನನ್ನ ಮನೆಗೆ ಬಂದು ಬಿ. ಫಾರಂ ನೀಡಿದ್ದರು ನಾಯಕರೇ ನನ್ನ ಮನೆಗೆ ಬಂದು ಬಿ ಫಾರ್ಮ್ ಕೊಟ್ಟು ಹೋಗಿದ್ದರು.

ಆದರೆ ಅಪ್ಪ-ಮಗ ಕಿತ್ತಾಡಿಕೊಂಡು ನನಗೆ ಅಪಮಾನ ಮಾಡಿದರು. ಬಳಿಕ ಮೈಸೂರು ಮಹಾರಾಜರ ಮಾತು ಕೇಳಿದ ಬಳಿಕ ನನಗೆ ಟಿಕೆಟ್ ಕೊಡಲಿಲ್ಲ ಎಂದರು.  ಜೆಡಿಎಸ್ ಅವರೇ ನನ್ನ ಮನೆಬಾಗಿಲಿಗೆ ಬಂದಿದ್ರು.

ಮೈಸೂರು ಮಹರಾಜ ಅಂದ್ರೆ ಜಯಚಾಮರಾಜೇಂದ್ರ ಒಡೆಯರ್ ಅಲ್ಲ. ನಮ್ಮಂತವರಲ್ಲೆ ಒಬ್ಬರು ಮಹಾರಾಜರಿದ್ದು, ಜೆಡಿಎಸ್ ಪಕ್ಷಕ್ಕೆ ಅವರೇ ಮಂತ್ರಿ, ಸೇನಾಧಿಪತಿ ಎಲ್ಲಾ ಅವರೊಬ್ಬರೆ ಆಗಿದ್ದಾರೆ. ಕಡೆಗೆ ಪಕ್ಷದಲ್ಲಿ ಅವರೊಬ್ಬರೇ ಉಳಿದುಕೊಳ್ಳುವುದು. ಎಲ್ಲರೂ ಪಕ್ಷದಿಂದ ಹೋಗಿರೋದು ಆ ಮಹಾರಾಜರಿಂದಲೇ ಎಂದು ಶಾಸಕ ಸಾ.ರಾ.ಮಹೇಶ್ ಹೆಸರೇಳದೆ ಲೇವಡಿ ಮಾಡಿದರು.

ಜನವರಿ 5ನೇ ತಾರೀಖು ನನ್ನ ಅವಧಿ ಮುಗಿಯಲಿದೆ ಅಂದು ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನು ಹೇಳುತ್ತೇನೆ. ಅಲ್ಲಿಂದ ನನ್ನ ಹೊಸ ರಾಜಕೀಯ ಜೀವನ ಆರಂಭವಾಗುತ್ತದೆ, 5ನೇ ತಾರೀಕಿನ ನಂತರ ರಫ್ ರಾಜಕಾರಣ ಮಾಡುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಗುಡುಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT