ಸಾಂದರ್ಭಿಕ ಚಿತ್ರ 
ರಾಜಕೀಯ

ರಾಜ್ಯದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಆರಂಭ

ರಾಜ್ಯದ 2 ಸಾವಿರ ಕಡೆಗಳಲ್ಲಿ ಬೃಹತ್ ಸದಸ್ಯತ್ವ ನೋಂದಣಿ ಅಭಿಯಾನವನ್ನು ಕಾಂಗ್ರೆಸ್ ಶನಿವಾರ ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರು ಸೇರಿದಂತೆ ಹಲವು ಮುಖಂಡರು ಬ್ಲಾಕ್ ಮಟ್ಟದಲ್ಲಿ ನಡೆದ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರು: ರಾಜ್ಯದ 2 ಸಾವಿರ ಕಡೆಗಳಲ್ಲಿ ಬೃಹತ್ ಸದಸ್ಯತ್ವ ನೋಂದಣಿ ಅಭಿಯಾನವನ್ನು ಕಾಂಗ್ರೆಸ್ ಶನಿವಾರ ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರು ಸೇರಿದಂತೆ ಹಲವು ಮುಖಂಡರು ಬ್ಲಾಕ್ ಮಟ್ಟದಲ್ಲಿ ನಡೆದ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಯಾವುದೇ ಚುನಾವಣೆಗೆ ಸ್ಪರ್ಧಿಸಲು ಹಾಗೂ ಪಕ್ಷದ ಹುದ್ದೆಗಳನ್ನು ಅಲಂಕರಿಸಲು ಪಕ್ಷದ ಸದಸ್ಯರಾಗಿ ಸೇರ್ಪಡೆಗೊಳ್ಳುವುದು ಅತ್ಯಗತ್ಯ ಎಂದು ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಪ್ರತಿ ಬೂತ್‌ನಲ್ಲಿ ಡಿಜಿಟಲ್ ಸದಸ್ಯತ್ವ ದಾಖಲು ಮಾಡಿಕೊಳ್ಳುವವರನ್ನು ನೇಮಿಸಲಾಗುವುದು, ಅವರು ಪ್ರತಿ ಮನೆಗೂ ಭೇಟಿ ನೀಡಿ  ಪಕ್ಷದ ಆ್ಯಪ್ ಬಳಸಿ ಸದಸ್ಯರನ್ನಾಗಿ ಮಾಡುತ್ತಾರೆ. ಶನಿವಾರ  ಸುಮಾರು 50,000 ಜನರು ನೋಂದಣಿಗಾಗಿ ಕಾಯುತ್ತಿದ್ದಾರೆ ಎಂದು ಅವರು ಹೇಳಿದರು.

 ಪ್ರತಿ ಸಕ್ರಿಯ ಸದಸ್ಯರು 25 ಸದಸ್ಯರನ್ನು ನೋಂದಾಯಿಸಿಕೊಳ್ಳಬೇಕು. ಪಕ್ಷದ ಅಪ್ಲಿಕೇಶನ್ ಬಳಸಿ ಸದಸ್ಯರನ್ನು ನೋಂದಣಿ ಮಾಡಲಾಗುವುದು ನಂತರ ಪರಿಶೀಲಿಸಲಾಗುತ್ತದೆ. ನನ್ನ ವಿವರಗಳನ್ನು ಕೂಡಾ ಪರಿಶೀಲಿಸಲಾಗುತ್ತದೆ ಎಂದು ಅವರು ತಿಳಿಸಿದರು. 

ವಿಧಾನಪರಿಷತ್ ಸದಸ್ಯ ಸಿಎಂ ಇಮ್ರಾಹಿಂ ಪಕ್ಷದ ಕಚೇರಿಗೆ ಬಂದು ಸದಸ್ಯತ್ವ ನೋಂದಾಯಿಸಿದ್ದಾರೆ. ಅಲ್ಲದೇ, ಪಕ್ಷದ ವಿಚಾರಗಳನ್ನು ಚರ್ಚಿಸಿದ್ದಾರೆ.  ಇಬ್ರಾಹಿಂ ತನ್ನ ಬಳಿ ಗುರುತಿನ ಚೀಟಿಯನ್ನು ಹೊಂದದ ಕಾರಣ, ಅವರು ಬೂತ್ ನಲ್ಲಿ  ಸದಸ್ಯರಾಗಿ ದಾಖಲಾಗಲು ನಿರ್ಧರಿಸಿದ್ದರು ಎಂದು ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT